Webdunia - Bharat's app for daily news and videos

Install App

ದರ್ಶನ್ ಮೂರನೇ ಬೇಡಿಕೆಯನ್ನೂ ಈಡೇರಿಸಿದ ಜೈಲು ಸಿಬ್ಬಂದಿ

Krishnaveni K
ಶನಿವಾರ, 7 ಸೆಪ್ಟಂಬರ್ 2024 (15:33 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರ ಮೂರನೇ ಬೇಡಿಕೆಯನ್ನೂ ಜೈಲು ಸಿಬ್ಬಂದಿಗಳು ಪೂರೈಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ತಪ್ಪಿಗೆ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ಇಲ್ಲಿಗೆ ದರ್ಶನ್ ಬಂದು ವಾರದ ಮೇಲಾಗಿದೆ. ಈ ವೇಳೆ ದರ್ಶನ್ ಸರ್ಜಿಕಲ್ ಚೇರ್, ಟಿವಿ ಮತ್ತು ಫೋನ್ ಮಾಡುವ ಅವಕಾಶಕ್ಕಾಗಿ ಬೇಡಿಕೆಯಿಟ್ಟಿದ್ದರು.

ಅದರಂತೆ ಅವರ ವೈದ್ಯಕೀಯ ವರದಿ ನೋಡಿಕೊಂಡು ಸರ್ಜಿಕಲ್ ಚೇರ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಅದಾದ ಬಳಿಕ ಜೈಲು ನಿಯಮಕ್ಕನುಗುಣವಾಗಿ ಮನೆಯವರೊಂದಿಗೆ ಫೋನ್ ನಲ್ಲಿ ಮಾತನಾಡಲು ಅವಕಾಶ ಮಾಡಿಕೊಡಲಾಯಿತು. ಚಾರ್ಜ್ ಶೀಟ್ ಸಲ್ಲಿಕೆ ಸಂದರ್ಭ ದರ್ಶನ್ ಮನೆಯವರೊಂದಿಗೆ ಮಾತನಾಡಿದ್ದರು.

ಬಳಿಕ ಅವರು ಟಿವಿಗೂ ಬೇಡಿಕೆಯಿಟ್ಟಿದ್ದರು. ವಿಚಾರಣಾಧೀನ ಖೈದಿಗಳಿಗೆ ಟಿವಿ ನೋಡುವ ಸೌಲಭ್ಯ ಕಲ್ಪಿಸಿಕೊಡಲು ಜೈಲು ನಿಯಮದಡಿ ಅವಕಾಶವಿದೆ. ಅದರಂತೆ ಇಂದು ಗಣೇಶ ಹಬ್ಬದ ದಿನ ದರ್ಶನ್ ಗೆ ಟಿವಿ ವ್ಯವಸ್ಥೆಯೂ ಆಗಿದೆ ಎಂದು ತಿಳಿದುಬಂದಿದೆ. ದರ್ಶನ್ ಇರುವ ಸೆಲ್ ಗೆ ಹಳೆಯ ಟಿವಿಯೊಂದನ್ನು ರಿಪೇರಿ ಮಾಡಿಸಿ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments