Webdunia - Bharat's app for daily news and videos

Install App

ಜೇಮ್ಸ್ ಥಿಯೇಟರ್ ನಿಂದ ತೆಗೆಯಲು ಬಿಜೆಪಿ ಒತ್ತಡ ಹಾಕಿಲ್ಲ: ನಿರ್ಮಾಪಕ ಕಿಶೋರ್

Webdunia
ಬುಧವಾರ, 23 ಮಾರ್ಚ್ 2022 (17:59 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ಎರಡೇ ವಾರಕ್ಕೆ ಥಿಯೇಟರ್ ನಿಂದ ಕಿತ್ತು ಹಾಕಲು ಬಿಜೆಪಿ ನಾಯಕರಿಂದ ಒತ್ತಡ ಬಂದಿದೆ ಎಂಬ ಆರೋಪವನ್ನು ನಿರ್ಮಾಪಕ ಕಿಶೋರ್ ಪತ್ತಿಕೊಂಡ ನಿರಾಕರಿಸಿದ್ದಾರೆ.

ಜೇಮ್ಸ್ ಕಿತ್ತು ಹಾಕಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಹಾಕಬೇಕೆಂದು ಕೆಲವು ಥಿಯೇಟರ್ ಮಾಲಿಕರಿಗೆ ಬಿಜೆಪಿ ಮುಖಂಡರಿಂದ ಒತ್ತಡ ಬಂದಿದೆ ಎಂಬ ವರದಿಗಳ ಬೆನ್ನಲ್ಲೇ ಅಪ್ಪು ಅಭಿಮಾನಿಗಳು ಗರಂ ಆಗಿದ್ದರು. ಜೊತೆಗೆ ಈ ವಿದ್ಯಮಾನದ ಬಗ್ಗೆ ನಿರ್ಮಾಪಕರು ವಿಪಕ್ಷ ನಾಯಕ ಸಿದ್ಧರಾಮಯ್ಯ ಬಳಿ ದೂರು ನೀಡಿದ್ದಾರೆ ಎಂದೂ ವರದಿಯಾಗಿತ್ತು.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಿಶೋರ್ ‘ಬಿಜೆಪಿ ನಾಯಕರು ಥಿಯೇಟರ್ ಮಾಲಿಕರ ಮೇಲೆ ಒತ್ತಡ ಹಾಕಿಲ್ಲ. ಆದರೆ ಜೇಮ್ಸ್ ಸಿನಿಮಾ ತೆಗೆಯಲು ಬೇರೆ ಯಾರೋ ಒತ್ತಡ ಹೇರುತ್ತಿದ್ದಾರೆ. ನಾನು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಜೇಮ್ಸ್ ಸಿನಿಮಾ ವೀಕ್ಷಿಸಲು ಆಹ್ವಾನಿಸಲು. ಇನ್ನು, ಸಿಎಂ ಬಸವರಾಜ ಬೊಮ್ಮಾಯಿವರನ್ನೂ ಭೇಟಿಯಾಗಿ ಆಹ್ವಾನ ನೀಡುತ್ತೇನೆ. ಸಿಎಂ ಸಾಹಬೇರು ಅಪ್ಪು ಅಣ್ಣ ಮತ್ತು ದೊಡ್ಮನೆ ಮೇಲೆ ಸಾಕಷ್ಟು ಅಭಿಮಾನ ಇಟ್ಟುಕೊಂಡಿದ್ದಾರೆ. ಅವರ ಕುಟುಂಬಕ್ಕೆ, ಚಿತ್ರರಂಗಕ್ಕೆ ಯಾವತ್ತೂ ಬೆಂಬಲವಾಗಿದ್ದರು. ಹೀಗಾಗಿ ಅವರ ಬಳಿ ಜೇಮ್ಸ್ ಸಿನಿಮಾ ಕಿತ್ತು ಹಾಕುತ್ತಿರುವುದರ ಬಗ್ಗೆ ಹೇಳುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments