Webdunia - Bharat's app for daily news and videos

Install App

ಚಿತ್ರೀಕರಣ ವೇಳೆ ಜಯರಾಂ ಕಾರ್ತಿಕ್‌ಗೆ ಗಾಯ, ಆಸ್ಪತ್ರೆಗೆ ದಾಖಲು

Webdunia
ಶುಕ್ರವಾರ, 27 ಫೆಬ್ರವರಿ 2015 (09:40 IST)
ಅಶ್ವಿನಿ ನಕ್ಷತ್ರದ ಜೆಕೆ ಕನ್ನಡ ಚಿತ್ರರಂಗದ ನಟ ಜೆಕೆ ಅಲಿಯಾಸ್ ಜಯರಾಂ ಕಾರ್ತಿಕ್ ಅವರು ಅಪಘಾತಕ್ಕೆ ತುತ್ತಾಗಿದ್ದಾರೆ. ಮತ್ತೊಮ್ಮೆ ಶ್  ಎನ್ನುವ ಚಿತ್ರದಲ್ಲಿ ನಟಿಸುತ್ತಿರುವ ಈ ನಾಯಕ ನಟ ಚಿತ್ರೀಕರಣದ ಸ್ಥಳದಲ್ಲಿ ಅಪಘಾತಕ್ಕೆ ಈಡಾಗಿದ್ದಾರೆ. ದೃಶ್ಯ ಒಂದರಲ್ಲಿ ಕುದುರೆ ಸವಾರಿ ಮಾಡುವಾಗ ಕುದುರೆ ಇವರ ಕಾಲು ಒದ್ದ ಕಾರಣ ಗಾಯವಾಗಿ ಅತಿಯಾದ ನೋವು ಉಂಟಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಕಾಲು ಊದಿದೆ  ಎನ್ನುವ ಸುದ್ದಿ ಇದೆ. 
ಈಟೀವಿ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುವ ಅಶ್ವಿನಿ ನಕ್ಷತ್ರ ಧಾರಾವಾಹಿಯ ಮೂಲಕ ಕನ್ನಡಿಗರಿಗೆ ಹೆಚ್ಚು ಗೊತ್ತಾದ ಈ ನಟ ಈಗ ಜಸ್ಟ್ ಲವ್ ಎನ್ನುವ ಚಿತ್ರದ ಜೊತೆಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಕರ್ನಾಟಕ ಬುಲ್ಡೋಜರ್ ಟೀಮ್‌ನಲ್ಲಿ ಪ್ರಮುಖ ಆಟಗಾರ ಸಹಿತ ಆಗಿರುವ ಜೆಕೆ ಕನ್ನಡ ಚಿತ್ರರಂಗದ ಭರವಸೆಯ ನಟರಾಗಿದ್ದಾರೆ. ಈಗ ಆದ ಗಾಯದಿಂದ ಬೇಗ ಗುಣಮುಖರಾಗಿ ಮತ್ತೆ ತಮ್ಮ ಕೆಲಸಗಳಲ್ಲಿ ತೊಡಗಿಸಿ ಕೊಳ್ಳಲಿ ಎನ್ನುವ ಹಾರೈಕೆ ನಮ್ಮದಾಗಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments