Webdunia - Bharat's app for daily news and videos

Install App

ಕೃಷ್ಣ ಮೃಗಗಳ ಬೇಟೆಯಾಡಿದ ಪ್ರಕರಣ; ನಟ ಸಲ್ಮಾನ್ ಖಾನ್ ದೋಷಿ, ಉಳಿದ ನಾಲ್ವರು ಆರೋಪದಿಂದ ಖುಲಾಸೆ

Webdunia
ಗುರುವಾರ, 5 ಏಪ್ರಿಲ್ 2018 (11:48 IST)
ರಾಜಸ್ಥಾನ : ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಸಹ ನಟ ನಟಿಯರು 20 ವರ್ಷಗಳ ಹಿಂದೆ ಕೃಷ್ಣ ಮೃಗಗಳ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ(ಇಂದು) ರಾಜಸ್ಥಾನದ ಜೋಧ್ ಪುರ ಕೋರ್ಟ್ ಅಂತಿಮ ತೀರ್ಪುನ್ನು ಪ್ರಕಟಿಸಿದೆ.


1998ರ ಅಕ್ಟೋಬರ್‌ 1 ಮತ್ತು 2ರಂದು 'ಹಮ್ ಸಾಥ್‌ ಸಾಥ್‌ ಹೈ' ಚಿತ್ರದ ಚಿತ್ರೀಕರಣದ ವೇಳೆ ಜೋಧ್‌ಪುರ್‌ ಸಮೀಪದ ಕಂಕಣಿ ಗ್ರಾಮದಲ್ಲಿ ಎರಡು ಕೃಷ್ಣಮೃಗ ಬೇಟೆಯಾಡಿದ ಆರೋಪದ ಮೇಲೆ  ಬಾಲಿವುಡ್‌‌ ನಟ ಸಲ್ಮಾನ್ ಖಾನ್ ಸೇರಿದಂತೆ ನಟ ಸೈಫ್ ಅಲಿ ಖಾನ್, ಹಾಗೂ ನಟಿಯರಾದ ಸೋನಾಲಿ ಬೇಂದ್ರೆ, ಟಬು ಹಾಗೂ ನೀಲಂ ಅವರ ಮೇಲೆ ಕೇಸು ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 28ರಂದು ಪ್ರಕರಣದ ಅಂತಿಮ ವಾದ-ಪ್ರತಿವಾದ ನಡೆದಿದ್ದು, ಇಂದು ಪ್ರಕರಣದ ಅಂತಿಮ ತೀರ್ಪನ್ನು ನ್ಯಾ.ದೇವ್‌ಕುಮಾರ್‌ ಖತ್ರಿ ಅವರು ಪ್ರಕಟಿಸಿದ್ದಾರೆ. ಇದರ ಪ್ರಕಾರ  ನಟ ಸಲ್ಮಾನ್ ಖಾನ್ ಅವರು ದೋಷಿ ಎಂದು ಪ್ರಕಟಿಸಲಾಗಿದೆ. ಆದರೆ ಉಳಿದ ನಾಲ್ವರು ನಟ-ನಟಿಯರನ್ನು ಈ ಆರೋಪದಿಂದ ಖುಲಾಸೆಗೊಳಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments