Webdunia - Bharat's app for daily news and videos

Install App

ಪ್ರೇಮ ಕವಿ ಕೆ. ಕಲ್ಯಾಣ್ ವೈವಾಹಿಕ ಬದುಕಿನಲ್ಲಿ ಬಿರುಗಾಳಿ

Webdunia
ಸೋಮವಾರ, 5 ಅಕ್ಟೋಬರ್ 2020 (09:26 IST)
ಬೆಂಗಳೂರು: ಪ್ರೇಮಕವಿ ಎಂದೇ ಖ್ಯಾತರಾಗಿರುವ ಚಿತ್ರಸಾಹಿತಿ ಕೆ.ಕಲ್ಯಾಣ್ ವೈವಾಹಿಕ ಬದುಕು ಮುರಿದು ಬೀಳುವ ಹಂತದಲ್ಲಿದೆ. ಕಲ್ಯಾಣ್ ವಿರುದ್ಧ ಆರೋಪ ಮಾಡಿರುವ ಪತ್ನಿ ಪೊಲೀಸ್ ಠಾಣೆ ಮಟ್ಟಿಲೇರಿದ್ದಾರೆ.

 

2005 ರಲ್ಲಿ ಕಲ್ಯಾಣ್-ಅಶ್ವಿನಿ ಮದುವೆಯಾಗಿದ್ದರು. ಇದೀಗ ತನ್ನ ಗಂಡ ತನಗೆ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿ ಅಶ್ವಿನಿ ಬೆಳಗಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ಸಮಸ್ಯೆಯಿಂದಾಗಿ ಕಳೆದ ಆರು ತಿಂಗಳಿನಿಂದ ಈ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ. ನಡು ರಾತ್ರಿ ಮನೆಗೆ ಬಂದು ಗಲಾಟೆ ಮಾಡಿದ್ದಾರೆ, ನನ್ನ ಪೋಷಕರಿಂದ ಕಲ್ಯಾಣ್ ಲಕ್ಷಾಂತರ ರೂಪಾಯಿ ಪಡೆದಿದ್ದಾರೆ. ನಮ್ಮ ಪೋಷಕರ ಆಸ್ತಿ ಮೇಲೆ ಕಣ್ಣು ಹಾಕಿದ್ದಾರೆ ಎಂಬಿತ್ಯಾದಿ ಆರೋಪ ಮಾಡಿದ್ದಾರೆ.

ಆದರೆ ಇದನ್ನು ನಿರಾಕರಿಸಿರುವ ಕಲ್ಯಾಣ್ ನನ್ನ ಪತ್ನಿಗೆ ಪರಿಚಿತರೇ ಮಾಟ ಮಂತ್ರ ಮಾಡಿ ಹೀಗೆಲ್ಲಾ ಮಾಡಿಸಿದ್ದಾರೆ. ನಾವಿಬ್ಬರೂ ಕೂತು ಮಾತನಾಡಿದರೆ ಸಮಸ್ಯೆ ಬಗೆಹರಿಯಬಹುದು. ಇಷ್ಟು ದಿವಸ ಇಲ್ಲದ ಸಮಸ್ಯೆಗಳು ಈಗ ಇದ್ದಕ್ಕಿದ್ದಂತೆ ಎಲ್ಲಿಂದ ಉದ್ಭವಿಸಿತು? ನಾನು ಅವರ ಪೋಷಕರ ಹಣದ ಮೇಲೆ ಕಣ್ಣಿಟ್ಟಿದ್ದರೆ ಯಾವತ್ತೋ ಅದನ್ನು ಪಡೆಯಬಹುದಿತ್ತು. ಯಾರೋ ಆಕೆಯ ಕೈಯಲ್ಲಿ ಇದನ್ನೆಲ್ಲಾ ಮಾಡಿಸುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments