Webdunia - Bharat's app for daily news and videos

Install App

ಟಪ್ಪಾಂಗುಚ್ಚಿ ಹಾಡೊಂದಕ್ಕೆ ಗಾಯಕರಾದ ಪ್ರೇಮಕವಿ ಕೆ ಕಲ್ಯಾಣ್

Webdunia
ಸೋಮವಾರ, 19 ಜೂನ್ 2017 (12:07 IST)
ಬೆಂಗಳೂರು: ಈ ವರೆಗೆ ಗೀತರಚನೆಕಾರರಾಗಿ, ಮ್ಯೂಸಿಕ್ ಡೈರೆಕ್ಟರ್ ಆಗಿ ಗಮನ ಸೆಳೆದಿದ್ದ ಕೆ ಕಲ್ಯಾನ ಈಗ ಗಾಯಕರಾಗಿದ್ದಾರೆ. ಮುತ್ತುಗಳನ್ನು ಪೋಣಿಸಿಟ್ಟಂತ ಸಾಹಿತ್ಯದ ಮೂಲಕ 3000ಕ್ಕೂ ಹೆಚ್ಚು ಹಾಡುಗಳನ್ನು ಬರೆದಿರುವ ಕೆ ಕಲ್ಯಾಣ್ ಈಗ ಮೊದಲ ಬಾರಿಗೆ ’ಜೊತೆಯಾಗಿರು’ ಚಿತ್ರದ ಮೂಲಕ ಗಾಯಕರಾಗಿದ್ದಾರೆ.
 
ಬಹುತೇಕ ಹೊಸಬರೇ ಇರುವ ಸತೀಶ್‌ ರೇ ನಿರ್ದೇಶನದ "ಜೊತೆಯಾಗಿರು' ಚಿತ್ರದಲ್ಲಿ ವಿರಾಟ್‌ ವೆಂಕಟೇಶ್‌ ನಾಯಕರಾಗಿದ್ದು, ರಶ್ಮಿ ನಾಯಕಿ. ಸುನೀಲ್‌ ಕಾಂಚನ್‌ ಸೇರಿದಂತೆ ಹಲವು ಹೊಸ ಕಲಾವಿದರೇ ನಟಿಸಿದ್ದಾರೆ. ಚಿತ್ರಕ್ಕೆ ವಿನು ಮನಸು ಸಂಗೀತವಿದೆ. ಅವರ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಹಾಡಿಗೆ ಕೆ.ಕಲ್ಯಾಣ್‌ ದನಿಯಾಗಿದ್ದಾರೆ.
 
ಸತೀಶ್‌ ರೇ ಅವರು ಬರೆದ, "ಊರ್‌ ತುಂಬ ಹುಡುಗೀರು, ನಮಗಂತ ಯಾರವರೊ, ಯಾವುದೂನು ಗೊತ್ತಾಗ್ತಿಲ್ವಲ್ಲ ...' ಎಂಬ ಟಪ್ಪಾಂಗುಚ್ಚಿ ಹಾಡಿಗೆ ಕೆ.ಕಲ್ಯಾಣ್‌ ತಮ್ಮ ದನಿ ಕೊಟ್ಟಿದ್ದಾರೆ. ಸ್ವತಃ ಸಂಗೀತ ನಿರ್ದೇಶಕರಾಗಿದ್ದರೂ ಕಲ್ಯಾಣ್‌, ಎಂದೂ ಹಾಡುವ ಪ್ರಯತ್ನ ಮಾಡಿರಲಿಲ್ಲ. ಟ್ರ್ಯಾಕ್‌ ಹಾಡಿ, ಗಾಯಕರಿಗೆ ಹೇಳಿ ಕೊಡುತ್ತಿದ್ದ ಕಲ್ಯಾಣ್‌ಗೆ, ಈ ಹೊಸಬರ ತಂಡ, ಒಮ್ಮೆಲೆ ಹಾಡಿ ಅಂತ ಪೀಡಿಸಿದ್ದರಿಂದ, "ಒಂದು ಪ್ರಯತ್ನ ಮಾಡುತ್ತೇನೆ, ಚೆನ್ನಾಗಿಲ್ಲ ಎನಿಸಿದರೆ, ತೆಗೆದು ಬೇರೆ ಗಾಯಕರಿಂದ ಹಾಡಿಸಿ' ಅಂದಿದ್ದರಂತೆ ಕಲ್ಯಾಣ್‌. ಕೊನೆಗೆ ಕಲ್ಯಾಣ್‌ ದನಿ ಕೇಳಿದ ತಂಡ, ಅವರ ವಾಯ್ಸ ಫಿಕ್ಸ್‌ ಮಾಡಿಬಿಟ್ಟಿದೆ. ಅಂದಹಾಗೆ, ಈ ಹಾಡು ಹಾಡುತ್ತಿದ್ದಂತೆಯೇ, ಈಗ ಇನ್ನೂ ಎರಡು ಸಿನಿಮಾಗಳಲ್ಲಿ ಹಾಡುವ ಕೋರಿಕೆಯೂ ಕಲ್ಯಾಣ್‌ಗೆ ಬಂದಿದೆಯಂತೆ.
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments