ಪುನೀತ್, ಸುದೀಪ್, ರಕ್ಷಿತ್ ಶೆಟ್ಟಿ ಮೂವರನ್ನು ಸೇರಿಸಿ ಸಿನಿಮಾ ಮಾಡ್ತಾರಂತೆ ನಿರ್ಮಾಪಕ ಕೆ . ಮಂಜು

Webdunia
ಶುಕ್ರವಾರ, 3 ಆಗಸ್ಟ್ 2018 (07:34 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಪವರ್ ಸ್ಟಾರ್ ಪುನೀತ್, ಕಿಚ್ಚ ಸುದೀಪ್ ಹಾಗೂ ರಕ್ಷಿತ್ ಶೆಟ್ಟಿ ಮೂವರು ಒಟ್ಟಿಗೆ ಸಿನಿಮಾ ಮಾಡುತ್ತಿದ್ದು ನಿರ್ಮಾಪಕ ಕೆ . ಮಂಜು ಅವರು  ಈ ಮೂವರನ್ನು ಒಟ್ಟಿಗೆ ಸೇರಿಸುವ ಪ್ರಯತ್ನ ಮಾಡ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ ಇವರ ಅಭಿಮಾನಿಗಳ ಸಂಭ್ರಮ ಹೆಚ್ಚಾಗಬಹುದು.


ಆದರೆ ಈ ಬಗ್ಗೆ ನಿರ್ಮಾಪಕ ಕೆ . ಮಂಜು ಅವರಲ್ಲಿಕೇಳಿದಾಗ ಅವರು ಹೇಳಿದ್ದು ಹೀಗೆ – ‘ಎಲ್ಲರೂ ಒಟ್ಟಿಗೆ ಕಾಣಿಸಿಕೊಳ್ತಿರೋದು ನಿಜ , ಆದರೆ ಒಂದೇ ಸಿನಿಮಾದಲ್ಲಿ ಅಲ್ಲ , ಒಂದೇ ಕಾರ್ಯಕ್ರಮದಲ್ಲಿ . ಚಿತ್ರದುರ್ಗದಲ್ಲಿ ವಿಷ್ಣುವರ್ಧನ್ ಜನ್ಮ ದಿನದಂದು ಈ ಮೂವರು ಒಟ್ಟಿಗೆ ಸೇರುತ್ತಿದ್ದಾರೆ’ ಎಂದಿದ್ದಾರೆ.


ಹಾಗೇ  ತನ್ನ ಮಗನ ಪಡ್ಡೆಹುಲಿ ಚಿತ್ರದ ಅಡಿಯೋ ರಿಲೀಸ್ ಕಾರ್ಯಕ್ರಮಕ್ಕಾಗಿ ಈ ಮೂವರು ನಟರು ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಈ‌ ಮೂರು ಸ್ಟಾರ್ ಗಳನ್ನು ಸೇರಿಸಿ ಅಡಿಯೋ ರಿಲೀಸ್ ಮಾಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇವರಿಗಾಗಿ ಸಿನಿಮಾ ಕೂಡ ಮಾಡುತ್ತೇನೆ . ಅದೇನು ದೊಡ್ಡ ವಿಷಯವಲ್ಲ , ಒಳ್ಳೆಯ ಕಥೆ ಸಿಗಬೇಕು ಅಷ್ಟೇ’ ಎಂದಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಕೊಂಚ ಬೇಸರವಾದರೂ ಕೂಡ ಒಂದೇ ಕಾರ್ಯಕ್ರಮದಲ್ಲಿ ಮೂವರನ್ನು ಒಟ್ಟಿಗೆ ನೋಡುವ ಭಾಗ್ಯ ಅಭಿಮಾನಿಗಳಿಗೆ ಸಿಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಲಕ್ಷ್ಮೀ ನಿವಾಸ ಧಾರವಾಹಿಯಿಂದ ಹೊರನಡೆದ ಹಿರಿಯ ನಟಿ ಅಂಜಲಿ: ಇನ್ನೊಬ್ಬ ಹಿರಿಯ ನಟಿಯೂ ಶೀಘ್ರವೇ ಔಟ್

ಮೂರು ಲಕ್ಷ ಹಣ ಕಳುವಾಯ್ತು ಎಂದು ದೂರು ಕೊಟ್ಟ ವಿಜಯಲಕ್ಷ್ಮಿಗೆ ಶಾಕ್ ನೀಡಿದ ಪೊಲೀಸರು

ಸೀತಾರಾಮ ಧಾರವಾಹಿಗೆ ಗಗನ್ ಬದಲು ಈ ನಟ ನಾಯಕನಾಗಬೇಕಿತ್ತು: ವೈಷ್ಣವಿ ಬಿಚ್ಚಿಟ್ಟ ಸತ್ಯ

ಮುಂದಿನ ಸುದ್ದಿ
Show comments