Webdunia - Bharat's app for daily news and videos

Install App

ಮಂಡ್ಯದಲ್ಲಿ ಇಂದು ಕಾಟೇರ ರೈತ ಗೀತೆ ಬಿಡುಗಡೆ

Webdunia
ಶನಿವಾರ, 23 ಡಿಸೆಂಬರ್ 2023 (13:20 IST)
Photo Courtesy: Twitter
ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾದ ಎರಡನೇ ಪ್ರಿ ರಿಲೀಸ್ ಈವೆಂಟ್ ಇಂದು ಮಂಡ್ಯದಲ್ಲಿ ನಡೆಯಲಿದೆ.

ಇಂದು ರೈತ ದಿನಾಚರಣೆಯ ಅಂಗವಾಗಿ ಚಿತ್ರತಂಡ ಈ ವಿಶೇಷ ಪ್ರಿ ರಿಲೀಸ್ ಈವೆಂಟ್ ಆಯೋಜಿಸಿದೆ. ಕಾಟೇರ ಸಿನಿಮಾದಲ್ಲಿ ರೈತರ ಕುರಿತಾದ ಹಾಡೊಂದು ಸೃಷ್ಟಿಸಲಾಗಿದ್ದು, ಆ ಹಾಡು ಇಂದು ಮಂಡ್ಯ ಜನರ ಮುಂದೆ ಬಿಡುಗಡೆಯಾಗಲಿದೆ. ಇಂದು ರಾತ್ರಿ 8.16 ಕ್ಕೆ ಆನಂದ್ ಅಡಿಯೂ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗಲಿದೆ.

ಇದಕ್ಕೆ ಮೊದಲು ಚಿತ್ರತಂಡ ಹುಬ್ಬಳ್ಳಿಯಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಟ್ರೈಲರ್ ಲೋಕಾರ್ಪಣೆ ಮಾಡಿದ್ದರು.

ಇದೀಗ ರೈತರಿಗಾಗಿಯೇ ವಿಶೇಷ ಪ್ರಿರಿಲೀಸ್ ಈವೆಂಟ್ ಆಯೋಜನೆ ಮಾಡಲಾಗಿದೆ. ಮಂಡ್ಯದಲ್ಲಿ ಬೃಹತ್ ವೇದಿಕೆಯಲ್ಲಿ ಇಂದು ಕಾರ್ಯಕ್ರಮ ನಡೆಯಲಿದ್ದು, ದರ್ಶನ್ ಸೇರಿದಂತೆ ಚಿತ್ರತಂಡ ಹಾಜರಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments