Select Your Language

Notifications

webdunia
webdunia
webdunia
webdunia

ಹೈಕೋರ್ಟ್ ಮೆಟ್ಟಿಲೇರಿದ ಕಾಲಾ ಚಿತ್ರತಂಡ

ಹೈಕೋರ್ಟ್ ಮೆಟ್ಟಿಲೇರಿದ ಕಾಲಾ ಚಿತ್ರತಂಡ
ಚೆನ್ನೈ , ಮಂಗಳವಾರ, 5 ಜೂನ್ 2018 (09:15 IST)
ಚೆನ್ನೈ: ಸೂಪರ್ ರಜನೀಕಾಂತ್ ಅಭಿನಯದ ಕಾಲಾ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಕನ್ನಡ ಹೋರಾಟಗಾರರಿಂದ ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಚಿತ್ರ ನಿರ್ಮಾಪಕರಾದ ಧನುಷ್ ಮತ್ತು ಪತ್ನಿ ಐಶ್ವರ್ಯಾ ಕೋರ್ಟ್ ಮೆಟ್ಟಿಲೇರಿದ್ದಾರೆ.

ರಜನಿ ಅಳಿಯ ಧನುಷ್ ಮತ್ತು ಪುತ್ರಿ ಐಶ್ವರ್ಯಾ ಈ ಚಿತ್ರದ ನಿರ್ಮಾಪಕರು. ಇದೀಗ ಕರ್ನಾಟಕದಲ್ಲಿ ಚಲನಚಿತ್ರ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಅವರೇ ಕಾಲಾ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದಿದ್ದರು. ಕಾವೇರಿ ವಿಚಾರದಲ್ಲಿ ರಜನೀಕಾಂತ್ ತಮಿಳುನಾಡು ಪರ ಹೇಳಿಕೆ ನೀಡಿದ್ದಕ್ಕೆ ಅವರ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಕನ್ನಡ ಸಂಘಟನೆಗಳಿಂದ ವಿರೋಧವಿದೆ.

ಈ ಹಿನ್ನಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಚಿತ್ರ ನಿರ್ಮಾಪಕರು, ಚಿತ್ರದ ಪ್ರದರ್ಶನ, ನಿರ್ದೇಶಕರು ಹಾಗೂ ಇತರರಿಗೆ ಭದ್ರತೆ ನೀಡಲು ಸೂಚನೆ ನೀಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಕಿಚ್ಚ ಸುದೀಪ್ ಮಾಡಿದ ಈ ಟ್ವೀಟ್ ನ ಒಳಗುಟ್ಟೇನು?!