Webdunia - Bharat's app for daily news and videos

Install App

ರಜಿನಿಕಾಂತ್ ರಾಜಕೀಯ ಎಂಟ್ರಿ ಬಗ್ಗೆ ಕಮಲ್ ಕೊಟ್ಟ ಶಾಕಿಂಗ್ ರಿಯಾಕ್ಷನ್

Webdunia
ಶುಕ್ರವಾರ, 26 ಮೇ 2017 (22:07 IST)

ತಮಿಳಿನ ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯ ಪ್ರವೇಶ ಬಹುತೇಕ ಖಚಿತವಾಗಿದೆ. ಇತ್ತೀಚೆಗೆ ಅಭಿಮಾನಿಗಳ ಸಭೆ ಬಳಿಕ ಮಾತನಾಡಿದ ರಜಿನಿ ನಾನು ತಮಿಳಿಗ, ಸಂಪೂರ್ಣ ರಾಜಕೀಯ ವ್ಯವಸ್ಥೆ ಬದಲಿಸಬೇಕಿದೆ. ಯುದ್ಧಕ್ಕೆ ಸಿದ್ಧರಾಗಿ ಎನ್ನುವ ಮೂಲಕ ರಾಜಕೀಯ ಕಹಳೆ ಮೊಳಗಿಸಿದ್ದಾರೆ.

 

ಆದರೆ, ರಜಿನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಮಿತ್ರ ಕಮಲ್ ಹಾಸನ್ ಅಷ್ಟಾಗಿ ತೃಪ್ತಿ ಇಲ್ಲ. ತಮಿಳಿನ ಬಿಗ್ಬಾಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿರುವ ಕಮಲ್ ಹಾಸನ್ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ರಜಿನಿ ರಾಜಕೀಯ ಪ್ರವೇಶಕ್ಕೆ ನಿರ್ಧರಿಸಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ಇದು ತಮಿಳುನಾಡಿನ ರಾಜಕೀಯ ಪ್ರವೇಶಕ್ಕೆ ಸೂಕ್ತ ಸಮಯವಲ್ಲ. ರಜಿನಿ ಅಥವಾ ಯಾರೇ ಆಗಿರಲಿ. ಯಾವೊಬ್ಬ ವೈಚಾರಿಕ ವ್ಯಕ್ತಿಯೂ ಅಂಥದ್ದೊಂದು ನಿರ್ಧಾರ ಕೈಗೊಳ್ಳುವುದಿಲ್ಲ ಎಂದಿದ್ದಾರೆ.

 
ಇದೇವೇಳೆ, ರಾಜಕೀಯ ಪ್ರವೇಶಿಸದಂತೆ ತಮ್ಮ ಮಿತ್ರ ರಜಿನಿಕಾಂತ್`ಗೆ ಸಲಹೆ ನೀಡುತ್ತೀರಾ ಎಂದು ಪತ್ರಕರ್ತರು ಕೇಳಿದ ಮರುಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಮಲ್ ಹಾಸನ್, ಈ ಪ್ರಶ್ನೆಗೆ ಉತ್ತರಿಸಲು ಇದು ಸೂಕ್ತ ವೇದಿಕೆಯಲ್ಲ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments