Webdunia - Bharat's app for daily news and videos

Install App

ಮೂಢನಂಬಿಕೆ ವಿರುದ್ಧ ಸಮರ ಸಾರುವ ’ಮೂಢಾಯಣ’

Webdunia
ಸೋಮವಾರ, 5 ಡಿಸೆಂಬರ್ 2016 (12:59 IST)
ಉಪಾಧ್ಯ ಅವರ ‘ಬಾಳ ಅರ್ಬುದ’ ಎಂಬ ಕಾದಂಬರಿ ಆಧಾರಿತ ಚಲನಚಿತ್ರ ‘ಮೂಢಾಯಣ’.  ಇದು ಮೂಢನಂಬಿಕೆಯ ವಿರುದ್ಧ ಹೋರಾಡುವ ಬಾಲಕನೊಬ್ಬನ ಕಥೆಯಾಗಿದೆ. ಬಾಲಕ ತನ್ನ ಗ್ರಾಮವನ್ನು ಮೂಢನಂಬಿಕೆ ಮುಕ್ತ ಗ್ರಾಮವಾಗಿಸುತ್ತಾನೆ.  ಬಾಲಕನ ಹೋರಾಟವನ್ನು ಗುರುತಿಸಿ, ಭಾರತಸರ್ಕಾರ ಅವನಿಗೆ ರಾಷ್ಟ್ರ ಪ್ರಶಸ್ತಿ ನೀಡುತ್ತದೆ. 
 
ಬಾಲಕ ರಾಷ್ಟ್ರಪ್ರಶಸ್ತಿಯನ್ನು ತಿರಸ್ಕರಿಸುತ್ತಾನೆ. ಕಾರಣ ತನ್ನ ಗ್ರಾಮವೊಂದು ಮೂಢನಂಬಿಕೆ ಮುಕ್ತವಾದರೆ ಸಾಲದು, ಇಡೀ ದೇಶವೇ ಮೂಢನಂಬಿಕೆ ಮುಕ್ತವಾಗಬೇಕೆಂಬುದು ಬಾಲಕನ ಹೆಬ್ಬಯಕೆಯಾಗಿರುತ್ತದೆ.  ಅದಕ್ಕಾಗಿ ಸರ್ಕಾರ ಮೂಢನಂಬಿಕೆಗಳನ್ನು ತಡೆಯುವ ಕಾನೂನು ಜಾರಿಗೆ ತಂದರೆ ಮಾತ್ರ ತಾನು ರಾಷ್ಟ್ರ ಪ್ರಶಸ್ತಿ ಸ್ವೀಕರಿಸುವುದಾಗಿ ಹೇಳುತ್ತಾನೆ.  
 
ಆಗ ಸರ್ಕಾರ ಬಾಲಕನ ಬೇಡಿಕೆಗೆ ಮಣಿದು, ಮೂಢನಂಬಿಕೆಗಳನ್ನು ತಡೆಯುವ ಕಾನೂನು ಜಾರಿಗೆ ತರುತ್ತದೆ.  ಆಗ ಮತ್ತೆ ಬಾಲಕನನ್ನು ಆಮಂತ್ರಿಸಿ ಅವನಿಗೆ ರಾಷ್ಟ್ರಪ್ರಶಸ್ತಿ ನೀಡುತ್ತದೆ. ಈ ಚಿತ್ರದಲ್ಲಿ ಮಾ.ಮನು, ಮಂಡ್ಯ ರಮೇಶ್, ಕಲ್ಯಾಣಿ, ಜೂ. ನರಸಿಂಹರಾಜು, ಭವ್ಯಶ್ರೀರೈ, ಐಶ್ವರ್ಯ, ನಾ.ಶ್ರೀನಿವಾಸ್, ಪಿ.ಎ. ಉಪಾಧ್ಯ, ರಾಧಾ, ನಾಗರತ್ನ ಮುಂತಾದವರಿದ್ದಾರೆ. 
 
ಚಿತ್ರವು ಗದಗ ಜಿಲ್ಲೆಯ ಅಬ್ಬೀಗೇರೆ ಗ್ರಾಮದಲ್ಲಿ ಸಂಪೂರ್ಣ ಚಿತ್ರೀಕರಣ ನಡೆದಿದೆ. ಭೂಮಿಕಾ ಆಟ್ರ್ಸ್ ಮೈಸೂರು ಲಾಂಛನದಲ್ಲಿ ಚಿತ್ರಕಥೆ-ಸಂಭಾಷಣೆ-ನಿರ್ದೇಶನ ಡಾ. ಡಿ.ಎ. ಉಪಾಧ್ಯ,  ರವರ ‘ಮೂಢಾಯಣ’  ಚಿತ್ರಕ್ಕೆ ಮೊದಲ ಪ್ರತಿ ಸಿದ್ಧವಾಗಿದ್ದು ಶೀಗ್ರದಲ್ಲೇ ಬಿಡುಗಡೆಯಾಗಲಿದೆ.
 
ಈ ಚಿತ್ರದ ಛಾಯಾಗ್ರಹಣ- ಚಂದ್ರಶೇಖರ್, ಸಂಕಲನ-ದಾಮೋದರ್, ಕಲೆ-ಮಂಜು, ನಿರ್ವಹಣಡ – ಎಸ್.ಎನ್. ಪಾಟೀಲ್,  ಮೈಸೂರಿನ ಶ್ರೀ ಅಲ್ಲಮಪ್ರಭು ಲಲಿತಕಲಾ ಅಕಾಡೆಮಿಯ ಡೀನ್ ಡಾ. ಡಿ.ಎ. ಉಪಾಧ್ಯ. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments