ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

Krishnaveni K
ಶುಕ್ರವಾರ, 10 ಅಕ್ಟೋಬರ್ 2025 (11:49 IST)
Photo Credit: Instagram
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ವಿವಾದಗಳ ಮತ್ತೆ ಪುನರಾರಂಭಗೊಂಡಿದೆ. ಆದರೆ ಸರ್ಕಾರ ಬಿಟ್ಟರೂ ನಾವು ಬಿಡಲ್ಲ ಎಂದು ಕನ್ನಡ ಪರ ಹೋರಾಟಗಾರರು ಗೇಟ್ ಏರಿ ಹೋರಾಟಕ್ಕಿಳಿದಿದ್ದಾರೆ.

ಬಿಗ್ ಬಾಸ್ ಶೂಟಿಂಗ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ನಲ್ಲಿ ಪರಿಸರ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಬೀಗ ಜಡಿಯಲಾಗಿತ್ತು. ಇದರಿಂದ ಬಿಗ್ ಬಾಸ್ ಶೋ ಅರ್ಧಕ್ಕೇ ನಿಂತಿತ್ತು. ಆದರೆ ಈ ವಿಚಾರ ವಿವಾದವಾಗುತ್ತಿದ್ದಂತೇ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶಿಸಿ ಮತ್ತೆ ಬಿಗ್ ಬಾಸ್ ತೆರೆಯುವಂತೆ ಮಾಡಿದ್ದರು.

ಆದರೂ ಕನ್ನಡ ಪರ ಹೋರಾಟಗಾರರು ಮಾತ್ರ ಹೋರಾಟ ಬಿಟ್ಟಿಲ್ಲ. ನಿನ್ನೆಯೂ ಬಿಗ್ ಬಾಸ್ ಮನೆ ಮುಂದೆ ಧಿಕ್ಕಾರ ಘೋಷಣೆ ಹಾಕುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು.

ಇವರ ಪ್ರತಿಭಟನೆ ಯಾವ ಪರಿ ಇತ್ತೆಂದರೆ ಕೆಲವು ಮಹಿಳೆಯರು ಆಳೆತ್ತರದ ಗೇಟ್ ಏರಿ ಒಳಗೆ ಹಾರಲು ಯತ್ನಿಸುತ್ತಿದ್ದರು. ಸರ್ಕಾರ ಬಿಟ್ಟರೂ ನಾವು ಬಿಡಲ್ಲ ಎಂದು ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments