Publish Date: Sun, 25 Jun 2023 (17:48 IST)
Updated Date: Sun, 25 Jun 2023 (17:50 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ಸಹೋದರನ ಪುತ್ರ, ಯುವ ನಟ ಸೂರಜ್ (ಧ್ರುವನ್) ಗಂಭೀರವಾಗಿ ಗಾಯಗೊಂಡಿದ್ದಾರೆ.
ಊಟಿಗೆ ಬೈಕ್ ರೈಡ್ ಮಾಡುವಾಗ ಚಾಮರಾಜನಗರದ ಬೇಗೂರು ಸಮೀಪ ಟಿಪ್ಪರ್ ಗೆ ಢಿಕ್ಕಿಯಾಗಿ ಸೂರಜ್ ಕಾಲಿಗೆ ಭಾರೀ ಪೆಟ್ಟು ಬಿದ್ದಿದೆ. ಪರಿಣಾಮ ಕಾಲು ಕತ್ತರಿಸಲಾಗಿದೆ ಎನ್ನಲಾಗಿದೆ. ಸದ್ಯಕ್ಕೆ ಅವರಿಗೆ ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ರಾಜ್ ಕುಟುಂಬಸ್ಥರು ಆಸ್ಪತ್ರೆಗೆ ತೆರಳಿ ಸಾಂತ್ವನ ಹೇಳಿದ್ದಾರೆ. ಸದ್ಯಕ್ಕೆ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂರಜ್ ಯುವ ನಟರಾಗಿದ್ದು ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.