Webdunia - Bharat's app for daily news and videos

Install App

ಡಬ್ಬಿಂಗ್ ಧಾರವಾಹಿಗಳ ವಿರುದ್ಧ ಮತ್ತಷ್ಟು ಕನ್ನಡ ಕಲಾವಿದರ ಆಕ್ರೋಶ

Webdunia
ಬುಧವಾರ, 10 ಜೂನ್ 2020 (09:10 IST)
ಬೆಂಗಳೂರು: ಕನ್ನಡ ಕಿರುತೆರೆ ವಾಹಿನಿಯಲ್ಲಿ ಕನ್ನಡ ಧಾರವಾಹಿಗಳನ್ನು ನಿಲ್ಲಿಸಿ ಡಬ್ಬಿಂಗ್ ಧಾರವಾಹಿಗಳಿಗೆ ಅನುವು ಮಾಡಿಕೊಡುತ್ತಿರುವುದರ ಬಗ್ಗೆ ದಿನೇ ದಿನೇ ಆಕ್ರೋಶ ಹೆಚ್ಚಾಗುತ್ತಿದೆ.


ಮೊನ್ನೆಯಷ್ಟೇ ನಟ ತೇಜಸ್ ಡಬ್ಬಿಂಗ್ ಧಾರವಾಹಿಗಳ ಬಗ್ಗೆ ಬಹಿರಂಗ ಧ್ವನಿಯೆತ್ತಿದ್ದರು. ಇದೀಗ ಕಿರುತೆರೆ ಬರಹಗಾರ ಸಚೇತ್ ಭಟ್‍ ಎಂಬವರು ತಮ್ಮ ಸಾಮಾಜಿಕ ಜಾಲತಾಣ ಪುಟದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಬ್ಬಿಂಗ್ ಧಾರವಾಹಿಗಳನ್ನು ಪ್ರೋತ್ಸಾಹಿಸುವವರಿಗೆ ಕೆಲವು ವಿಚಾರಗಳು ಅರ್ಥವಾಗುವುದೇ ಇಲ್ಲ. ನೂರಾರು ಕನ್ನಡ ಕಲಾವಿದರು, ತಂತ್ರಜ್ಞರು ಇಂದು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಲಾಕ್ ಡೌನ್ ಮುಗಿದ ಬಳಿಕ ಕೆಲಸ ಸಿಗುತ್ತದೆ ಎಂಬ ಖುಷಿಯಲ್ಲಿದ್ದವರಿಗೆ ಕಹಿ ಗುಳಿಗೆ ಸಿಕ್ಕಿದೆ. ಹಿಂದಿ ಧಾರವಾಹಿಗಳ ಗುಣಮಟ್ಟಕ್ಕೆ ತಕ್ಕಂತೆ ಧಾರವಾಹಿ ಮಾಡಲು ನಮಗೂ ತಾಕತ್ತು ಇದೆ. ಆದರೆ ಅದಕ್ಕೆ ಅವಕಾಶ ಸಿಗಬೇಕಲ್ಲವೇ?

ಇಷ್ಟು ದಿನ ನಿಮಗೆ ಲಾಭ ಮಾಡಿಕೊಡಲು ಕನ್ನಡಿಗರೇ ಬೇಕಾಗಿತ್ತು. ಈಗ ಲಾಕ್ ಡೌನ್ ನಲ್ಲಿ ಬ್ಯುಸಿನೆಸ್ ಗಾಗಿ ಡಬ್ಬಿಂಗ್ ಧಾರವಾಹಿಗಳ ಹಿಂದೆ ಬಿದ್ದಿರುವುದು ಸರಿಯೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಕ್ರೋಶ ಮತ್ತಷ್ಟು ಹೆಚ್ಚಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments