Webdunia - Bharat's app for daily news and videos

Install App

ಆಂಧ್ರದಲ್ಲೂ ಹವಾ ಎಬ್ಬಿಸಲಿರುವ ’ಬಳ್ಳಾರಿ ದರ್ಬಾರ್’

Webdunia
ಬುಧವಾರ, 28 ಡಿಸೆಂಬರ್ 2016 (09:35 IST)
ಸತ್ಯ ಘಟನೆ ಆಧಾರಿತವೆಂಬುದೂ ಸೇರಿದಂತೆ ಹಲವಾರು ಕಾರಣಗಳಿಂದ ಸುದ್ದಿಯಲ್ಲಿರುವ `ಬಳ್ಳಾರಿ ದರ್ಬಾರ್’ ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಸ್ಮೈಲ್ ಶ್ರೀನು ತಮ್ಮ ಸ್ನೇಹಿತರೊಡಗೂಡಿ ನಿರ್ಮಾಣದ ಹೊಣೆಯನ್ನೂ ಹೊತ್ತುಕೊಂಡು, ನಿರ್ದೇಶನ ಮಾಡಿರುವ ಚಿತ್ರ ಬಳ್ಳಾರಿ ದರ್ಬಾರ್. 
 
ಈ ಚಿತ್ರ ಆಂಧ್ರಪ್ರದೇಶದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ. ಇನ್ನುಳಿದಂತೆ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿಯೂ ಹೆಚ್ಚಿನ ಚಿತ್ರ ಮಂದಿರಗಳಲ್ಲಿ ಬಳ್ಳಾರಿ ದರ್ಬಾರ್ ಬಿಡುಗಡೆಯಾಗುತ್ತಿದೆ. ಬಳ್ಳಾರಿಯಲ್ಲಿ ಈ ಹಿಂದೆ ನಡೆದಿದ್ದ ಅಕ್ರಮ ಗಣಿಗಾರಿಕೆಯ ವಿವರಗಳನ್ನಿಟ್ಟುಕೊಂಡು ಮಾಡಿದ್ದಾರೆಂದು ಹೇಳಲಾಗುತ್ತಿರುವ ಈ ಚಿತ್ರ ಆ ಕಾರಣದಿಂದಲೇ ಸುದ್ದಿ ಮಾಡುತ್ತಿದೆ. 
 
ಆದರೆ ನಿರ್ದೇಶಕ ಸ್ಮೈಲ್ ಶ್ರೀನು ಅವರು ಈ ಚಿತ್ರದಲ್ಲಿ ಯಾರನ್ನೂ ಟಾರ್ಗೆಟ್ ಮಾಡಿಲ್ಲ, ಅಂಥಾ ಯಾವ ಉದ್ದೇಶವೂ ಚಿತ್ರ ತಂಡಕ್ಕಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಮತ್ತು ಅದರ ಪರಿಣಾಮಗಳು ಹಾಗೂ ಈ ವ್ಯೂಹದೊಳಗೆ ಸಿಕ್ಕ ಯುವ ಸಮುದಾಯದ ಕಥೆ ಹೇಳುತ್ತಲೇ ಸಮಾಜಕ್ಕೊಂದು ಉತ್ತಮ ಸಂದೇಶ ಕೊಡುವ ಚಿತ್ರ 
ಮಾಡಿದ್ದೇವೆಂಬುದು ಚಿತ್ರ ತಂಡದ ಮಾತು. 
 
ಇದಕ್ಕೂ ಮುಂಚೆ `ತೂಫಾನ್’ ಎಂಬ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಹೇಳಿದ್ದ ಶ್ರೀನು, ಬಳಿಕ ಹೈದರಾಬಾದ್‍ನತ್ತ ಹೊರಳಿದ್ದರು. ಅಲ್ಲಿನ ಕೆಲ ನಿರ್ದೇಶಕರ ಬಳಿ ನಿರ್ದೇಶನದ ಮತ್ತಷ್ಟು ವರಸೆಗಳನ್ನು ಕಲಿತು ಬಂದಿರುವ ಅವರೀಗ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 
 
ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ಮಾಣವೂ ಶ್ರೀನು ಅವರದ್ದೇ ಎಂಬುದು ವಿಶೇಷ.  ಈ ಗಣಿ ಮಾಫಿಯಾದ ಸುತ್ತಲಿನ ದ್ವೇಷದ ಜೊತೆಗೇ ನವಿರಾದ ಪ್ರೀತಿ, ಚೆಂದದ ಹಾಡುಗಳೂ ಇರುವ ಈ ಚಿತ್ರ ಈ ವಾರ ತೆರೆ ಕಾಣುತ್ತಿದೆ. 
 
ಈಗಾಗಲೇ ತೆಲುಗು ಚಿತ್ರ ರಂಗದಲ್ಲಿ ಒಂದಷ್ಟು ಹೆಸರು ಮಾಡಿರುವ ಚರಣ್ ಅರ್ಜುನ್ ಅವರ ಸಂಗೀತ ನಿರ್ದೇಶನ ಇರುವ ಈ ಚಿತ್ರಕ್ಕೆ ಕಾರ್ತಿಕ್ ಸುಬ್ರಮಣಿ ಛಾಯಾಗ್ರಹಣವಿದೆ. ಪೋಲಾ ಶ್ರೀನಿವಾಸ ಬಾಬು, ಮಮತಾ ರಾವುತ್, ಶುಭ ರಕ್ಷಾ ಮುಂತಾದವರ ತಾರಾಗಣವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಮುಂದಿನ ಸುದ್ದಿ
Show comments