Webdunia - Bharat's app for daily news and videos

Install App

ಪುನೀತ್ ಗೆ ಕಿರುತೆರೆಯ ಗಾಯನ ನಮನ

Webdunia
ಶನಿವಾರ, 6 ನವೆಂಬರ್ 2021 (11:15 IST)
ಬೆಂಗಳೂರು: ನಮ್ಮನ್ನು ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಕಿರುತೆರೆ ಗಾಯನ ನಮನ ಸಲ್ಲಿಸಲು ಮುಂದಾಗಿದೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಎಸ್ ಪಿ ಬಾಲಸುಬ್ರಮಣ್ಯಂ ಸ್ಮರಣಾರ್ಥ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಗೆ ಹಾಡುಗಳ ಮೂಲಕ ಅಶ್ರುತರ್ಪಣ ಸಲ್ಲಿಸಲು ವಾಹಿನಿ ಮುಂದಾಗಿದೆ. ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್, ಗಾಯಕ ರಾಜೇಶ್ ಕೃಷ್ಣನ್ ಪವರ್ ಸ್ಟಾರ್ ಬಗ್ಗೆ ತಮ್ಮ ಮನದಾಳದ ಮಾತುಗಳನ್ನಾಡಲಿದ್ದಾರೆ. ಈ ಕಾರ್ಯಕ್ರಮ ಶನಿವಾರ ಮತ್ತು ಭಾನುವಾರ ರಾತ್ರಿ 9 ಕ್ಕೆ ಪ್ರಸಾರವಾಗಲಿದೆ.

ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಹಾಡಿನ ಶೋನಲ್ಲೂ ಪವರ್ ಸ್ಟಾರ್ ಸ್ಮರಣಾರ್ಥ ಭಾನುವಾರ ವಿಶೇಷ ಎಪಿಸೋಡ್ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಸ್ಪರ್ಧಿಗಳು ಪುನೀತ್ ಹಾಡುಗಳನ್ನು ಹಾಡಲಿದ್ದು, ತೀರ್ಪುಗಾರರಾದ ಹಂಸಲೇಖ, ವಿಜಯ್ ಪ್ರಕಾಶ್, ಜೊತೆಗೆ ಸಾಹಿತಿ ಜಯಂತ್ ಕಾಯ್ಕಿಣಿ ಕೂಡಾ ಭಾಗಿಯಾಗಲಿದ್ದು, ಪುನೀತ್ ಬಗ್ಗೆ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments