Webdunia - Bharat's app for daily news and videos

Install App

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನ

Krishnaveni K
ಮಂಗಳವಾರ, 16 ಏಪ್ರಿಲ್ 2024 (11:58 IST)
ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಮೇರು ಪ್ರತಿಭೆ, ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದಾಗಿ ಸಾವನ್ನಪ್ಪಿರುವ ಸುದ್ದಿ ಬಂದಿದೆ.

81 ವರ್ಷದ ದ್ವಾರಕೀಶ್ ಇಂದು ನಿಧನರಾಗಿರುವುದಾಗಿ ಅವರ ಪುತ್ರ ಯೋಗಿ ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿ ಅವರಿಗೆ ಆರೋಗ್ಯದಲ್ಲಿ ಸಣ್ಣ ಏರುಪೇರಾಗಿತ್ತು. ಬೇಧಿಯಾಗುತ್ತಿದ್ದ ಕಾರಣ ಅವರು ಸರಿಯಾಗಿ ನಿದ್ರಿಸಲು ಸಾಧ‍್ಯವಾಗಿರಲಿಲ್ಲ. ಹಾಗಿದ್ದರೂ ತಡರಾತ್ರಿ ಎರಡು ಗಂಟೆಗಳ ಕಾಲ ನಿದ್ರಿಸಿದವರು ಬೆಳಿಗ್ಗೆ ಎದ್ದಿರಲಿಲ್ಲ.

ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ದ್ವಾರಕೀಶ್ ಸಾವನ್ನಪ್ಪಿರುವ ಸುದ್ದಿ ಸ್ಯಾಂಡಲ್ ವುಡ್ ಗೆ ಆಘಾತವಾಗಿದೆ. ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಫ್ಯಾನ್ಸ್ ಕಂಬನಿ ಮಿಡಿಯುತ್ತಿದ್ದಾರೆ. ಸಾಹಸಸಿಂಹ ವಿಷ್ಣುವರ್ಧನ್ ಅವರ ಆಪ್ತ ಗೆಳೆಯನಾಗಿದ್ದ ದ್ವಾರಕೀಶ್ ಹಲವು ಸಿನಿಮಾಗಳಲ್ಲಿ ನಾಯಕನಾಗಿ, ಪೋಷಕ ನಟನಾಗಿ, ಹಾಸ್ಯ ಕಲಾವಿದನಾಗಿ ಮಿಂಚಿದ್ದರು.

ಕೆಲವು ಸಮಯದ ಹಿಂದೆ ಅವರ ಸಾವಿನ ಸುಳ್ಳು ಸುದ್ದಿ ಹರಿದಾಡಿತ್ತು. ಬಳಿಕ ಅವರೇ ಸ್ಪಷ್ಟನೆ ನೀಡಿದ್ದರು. ಆದರೆ ಈ ಬಾರಿ ನಿಜವಾಗಿಯೂ ಸಾವನ್ನಪ್ಪಿರುವ ದುಃಖದ ಸಮಾಚಾರ ಬಂದಿದೆ. ಇತ್ತೀಚೆಗಿನ ಸಿನಿಮಾ ನಿರ್ಮಾಣದಿಂದ ಕೈ ಸುಟ್ಟುಕೊಂಡಿದ್ದ ಅವರು, ಅನಾರೋಗ್ಯವೂ ಕಾಡುತ್ತಿದ್ದರಿಂದ ಚಿತ್ರರಂಗದಿಂದ ದೂರವಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments