ಕಾಂತಾರ/ತೋತಾಪುರಿ ನಿಮ್ಮ ಆಯ್ಕೆ ಯಾವುದು?

Webdunia
ಶುಕ್ರವಾರ, 30 ಸೆಪ್ಟಂಬರ್ 2022 (08:00 IST)
Photo Courtesy: Twitter
ಬೆಂಗಳೂರು: ಕನ್ನಡ ಸಿನಿ ಪ್ರೇಕ್ಷಕರಿಗೆ ಈ ದಸರಾ ನಿಜಕ್ಕೂ ಹಬ್ಬವಾಗಲಿದೆ. ಎರಡು ಬಹುನಿರೀಕ್ಷಿತ ಸಿನಿಮಾಗಳು ಇಂದು ರಿಲೀಸ್ ಆಗುತ್ತಿವೆ.

ನವರಸನಾಯಕ ಜಗ್ಗೇಶ್-ವಿಜಯ್ ಪ್ರಸಾದ್ ಕಾಂಬಿನೇಷನ್ ನಲ್ಲಿ ಈಗಾಗಲೇ ನೀರ್ ದೋಸೆ ಎಂಬ ಹಿಟ್ ಚಿತ್ರಕೊಟ್ಟಿತ್ತು. ಇದೀಗ ತೋತಾಪುರಿ ಮೂಲಕ ಈ ಜೋಡಿ ಪ್ರೇಕ್ಷಕರಿಗೆ ಕಚಗುಳಿಯಿಡಲು ಬರುತ್ತಿದೆ. ಇದು ಪಕ್ಕಾ ವಿಜಯ್ ಪ್ರಸಾದ್ ಶೈಲಿಯ ಸಿನಿಮಾ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಜೊತೆಗೆ ಜಗ್ಗೇಶ್ ಕಾಮಿಡಿ, ಮ್ಯಾನರಿಸಂ, ಅದಿತಿ ಪ್ರಭುದೇವ ನಿಮಗೆ ಇಷ್ಟವಾಗಲಿದ್ದಾರೆ.

ಸ್ಯಾಂಡಲ್ ವುಡ್ ಕ್ರಿಯೇಟಿವ್ ನಿರ್ದೇಶಕ ಎಂಬುದನ್ನು ರಿಷಬ್ ಶಟ್ಟಿ ಈಗಾಗಲೇ ಪ್ರೂವ್ ಮಾಡಿದ್ದಾರೆ. ರಿಷಬ್ ಸಿನಿಮಾಗಳೆಂದರೆ ಮನರಂಜನೆ ಜೊತೆಗೆ ಉತ್ತಮ ಕತೆ ಇರುತ್ತದೆ ಎನ್ನುವುದು ಪ್ರೇಕ್ಷಕರಿಗೆ ಗೊತ್ತೇ ಇರುತ್ತದೆ. ಇದೀಗ ರಿಷಬ್ ತಮ್ಮದೇ ಶೈಲಿಯಲ್ಲಿ ಸಿನಿಮಾವನ್ನು ನಿರ್ದೇಶಿಸಿ, ನಟಿಸಿರುವ ಸಿನಿಮಾ ಕಾಂತಾರ ಇಂದಿನಿಂದ ಪ್ರೇಕ್ಷಕರ ಮುಂದೆ ಬರುತ್ತಿದೆ. ಈ ಎರಡೂ ಸಿನಿಮಾಗಳೂ ಪ್ರೇಕ್ಷಕರಿಗೆ ರಸದೌತಣ ನೀಡುವುದು ಗ್ಯಾರಂಟಿ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments