Webdunia - Bharat's app for daily news and videos

Install App

ಕಪಟನಾಟಕ ಪಾತ್ರಧಾರಿ’ ಹಾಡು `ಯಾಕೆ ಅಂತಾ ಗೊತ್ತಿಲ್ಲ ಕಣ್ರೀ...’!

Webdunia
ಸೋಮವಾರ, 12 ಆಗಸ್ಟ್ 2019 (14:58 IST)
``ಯಾಕೆ ಅಂತಾ ಗೊತ್ತಿಲ್ಲ ಕಣ್ರೀ... ನನ್ನನ್ನು ನೋಡಿ ನಕ್ಬಿಟ್ಲು ಸುಂದ್ರಿ..’’ – `ಕಪಟನಾಟಕ ಪಾತ್ರಧಾರಿ’ ಚಿತ್ರತಂಡ ರಿಲೀಸ್ ಮಾಡಿರುವ ಮೊದಲ ಹಾಡು. ಈ ಹಾಡನ್ನು ಇತ್ತೀಚೆಗೆ ನಟ ರಿಷಿ ರಿಲೀಸ್ ಮಾಡಿದ್ದಾರೆ. 
ನಿರ್ದೇಶಕ ಕ್ರಿಶ್ ಅವರ ಕನಸಿನ ಕೂಸಾದ `ಕಪಟನಾಟಕ ಪಾತ್ರಧಾರಿ’ಯ ಹಾಡಿಗೆ ಆದಿಲ್ ನದಾ ಸಂಗೀತ ಸಂಯೋಜಿಸಿದ್ದಾರೆ. ತೀರಾ ಹೊಸದೆನ್ನುವ ಸಾಲುಗಳು ಮತ್ತು ಅಷ್ಟೇ ಫ್ರೆಷ್ ಆಗಿರುವ ಟ್ಯೂನು ಇರುವ ಕಾರಣಕ್ಕೆ ``ಯಾಕೆ ಅಂತಾ ಗೊತ್ತಿಲ್ಲ ಕಣ್ರೀ...’’ ಹಾಡು ಎಲ್ಲರನ್ನೂ ಸೆಳೆಯುವಂತಿದೆ. ಸದ್ಯ ಯು ಟ್ಯೂಬ್’ನಲ್ಲಿ ಈ ಹಾಡು ಟ್ರೆಂಡ್ ಸೃಷ್ಟಿಸುವ ಎಲ್ಲ ಸಾಧ್ಯತೆಯನ್ನೂ ತೋರಿದೆ.
ಒಬ್ಬ ಆಟೋ ಚಾಲಕ, ಅವನ ಬದುಕಿನ ರೀತಿ ಜೊತೆಗೊಬ್ಬಳು ಹುಡುಗಿ, ಅವರ ಸುತ್ತ ನಡೆಯುವ ಘಟನೆಗಳನ್ನು ವಿಶಿಷ್ಠವಾದ ಚಿತ್ತಕತೆಯ ಮೂಲಕ ಹೇಳಹೊರಟಿರುವ ಸಿನಿಮಾ `ಕಪಟನಾಟಕ ಪಾತ್ರಧಾರಿ’. ಈ ಚಿತ್ರದ ನಿರ್ದೇಶಕ ಕ್ರಿಶ್ ಅವರು ಬರೆದಿಟ್ಟುಕೊಂಡಿದ್ದ ಕಥೆಗೆ ಯಾರನ್ನು ಹೀರೋ ಮಾಡುವುದು ಅಂತಾ ಯೋಚಿಸುತ್ತಿದ್ದ ಸಂದರ್ಭದಲ್ಲೇ ಹುಲಿರಾಯ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿತ್ತಂತೆ. 
ಅದರಲ್ಲಿ ಬಾಲು ಅವರ ದನಿ ಕೇಳಿಯೇ ಕ್ರಿಶ್ `ಇವರೇ ನಮ್ಮ ಚಿತ್ರದ ನಾಯಕನಟ’ ಅಂತಾ ಫಿಕ್ಸ್ ಆಗಿದ್ದರಂತೆ. ಅಂದುಕೊಂಡಂತೇ ಬಾಲು ಅವರಿಗೆ ಕಥೆ ಒಪ್ಪಿಸಿ ಸಿನಿಮಾ ಆರಂಭಿಸಿ ಈಗ ಬಿಡುಗಡೆಯ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ಸದ್ಯ ಈ ಚಿತ್ರದ ಒಂದೊಂದೇ ಹಾಡುಗಳನ್ನು ಲೋಕಾರ್ಪಣೆ ಮಾಡಲು ಕ್ರಿಶ್ ಮತ್ತು ಚಿತ್ರತಂಡ ನಿರ್ಧರಿಸಿದ್ದಾರೆ. ಅದರಂತೆ `ಕಪಟನಾಟಕ ಪಾತ್ರಧಾರಿ’ ಚಿತ್ರದ ಒಂದು ಹಾಡು ಈಗ ಯೂ ಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ.  
`ಕಪಟನಾಟಕ ಪಾತ್ರಧಾರಿ’ ಚಿತ್ರದ ಚಿತ್ರೀಕರಣ ಬಹುತೇಕ ಬೆಂಗಳೂರಿನ ಸುತ್ತಮುತ್ತಲೇ ನೆರವೇರಿದೆ. ಕ್ರಿಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಆದಿಲ್ ನದಾ ಅವರು ಚಿತ್ರಕ್ಕೆ ಸಂಗೀತ ನೀಡಿದ್ದು, ಕ್ರಿಶ್, ವೇಣು ಹಸ್ರಾಳಿ, ಚಾಣಕ್ಯ, ಅನಿರುದ್ಧ್ ಶಾಸ್ತ್ರಿ ಹಾಡುಗಳನ್ನು ರಚಿಸಿದ್ದಾರೆ. ಹರಿಚರಣ್, ಸಿದ್ಧಾರ್ಥ್, ಮಾಧುರಿ ಶೇಷಾದ್ರಿ, ಇಶಾ ಸುಚಿ, ಪವನ್ ಪಾರ್ಥ ಹಾಗೂ ಅನಿರುದ್ದ್ ಶಾಸ್ತ್ರಿ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ.

ಕಿರಣ್ ಚಂದ್ರ ಹಾಗೂ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ. ಸಂಗೀತ ಭಟ್, ಬಾಲು ನಾಗೇಂದ್ರ, ಕರಿ ಸುಬ್ಬು, ಶಂಕರ್ ನಾರಾಯಣ್, ಪ್ರಕಾಶ್ ತುಮ್ಮಿನಾಡು, ಉಗ್ರಂ ಮಂಜು, ಜಯದೇವ್, ನವೀನ್ ವಾಸುದೇವ್, ಸುನೀಲ್ ಕುಲಕರ್ಣಿ ಸೇರಿದಂತೆ ಸಾಕಷ್ಟು ನಡರು ಈ ಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments