ಕರ್ನಾಟಕ ಬುಲ್ಡೋಜರ್ಸ್ ಗೆ ಜಯ ತಂದುಕೊಟ್ಟ ಬಚ್ಚನ್, ಜೆಕೆ

Webdunia
ಭಾನುವಾರ, 5 ಮಾರ್ಚ್ 2023 (09:00 IST)
Photo Courtesy: Twitter
ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್ ಮತ್ತೆ ಗೆಲುವು ಕಂಡಿದೆ. ಇದರೊಂದಿಗೆ ಸಿಸಿಎಲ್ ನಲ್ಲಿ ಕರ್ನಾಟಕ ಸತತ ಮೂರನೇ ಗೆಲುವು ಪಡೆದಿದೆ.

ನಿನ್ನೆಯ ಪಂದ್ಯದಲ್ಲಿ ಚೆನ್ನೈ ತಂಡದ ವಿರುದ್ಧ ಕರ್ನಾಟಕ 6 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲ ಇನಿಂಗ್ಸ್ ನಲ್ಲಿ ಚೆನ್ನೈ 84 ರನ್ ಗಳಿಸಿತ್ತು. ಕರ್ನಾಟಕ 109 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ರನ್ ಹಿನ್ನಡೆಯಿದ್ದರೂ ಅತ್ಯುತ್ತಮ ಬ್ಯಾಟಿಂಗ್ ನಡೆಸಿದ ಚೆನ್ನೈ 126 ರನ್ ಪೇರಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕರ್ನಾಟಕ ಆರಂಭದ ಮೂರು ಓವರ್ ಗಳಲ್ಲಿ ಅತ್ತ ರನ್ ಗಳಿಸಲಾಗದೇ ಎರಡು ವಿಕೆಟ್ ಕಳೆದುಕೊಂಡು ಪರದಾಡಿತು. ಆಗ ಕರ್ನಾಟಕ ಸೋಲುವ ಭೀತಿಯಲ್ಲಿತ್ತು.

ಆದರೆ ಕಿಚ್ಚ ಸುದೀಪ್ ಔಟಾದ ಬಳಿಕ ಕ್ರೀಸ್ ಗೆ ಬಂದ ಬಚ್ಚನ್ ಪಂದ್ಯದ ಚಿತ್ರಣ ಬದಲಾಯಿಸಿದರು. ಮೊದಲ ಬಾಲ್ ನಿಂದಲೇ ಹೊಡೆತಕ್ಕೆ ಕೈ ಹಾಕಿದ ಬಚ್ಚನ್ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇವರಿಗೆ ತಕ್ಕ ಸಾಥ್ ನೀಡಿದ ಅನುಭವಿ ಜಯರಾಮ್ ಕಾರ್ತಿಕ್ ಕೂಡಾ 30 ರನ್ ಗಳಿಸಿ ಗೆಲುವಿನ ರೂವಾರಿಯಾದರು. ಇದರೊಂದಿಗೆ ಕರ್ನಾಟಕಕ್ಕೆ ಮುಂದಿನ ಪಂದ್ಯ ಔಪಚಾರಿಕವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments