Select Your Language

Notifications

webdunia
webdunia
webdunia
webdunia

ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧಿಕಾರಿಗಳ ಭೇಟಿ

Darshan

Krishnaveni K

ಬೆಂಗಳೂರು , ಶನಿವಾರ, 15 ಜೂನ್ 2024 (10:07 IST)
ಬೆಂಗಳೂರು: ನಟ ದರ್ಶನ್ ಮತ್ತು ಸ್ನೇಹಿತರು ಮಾಡಿದ ಹಲ್ಲೆಯಿಂದಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಮೊನ್ನೆ ದರ್ಶನ್ ರನ್ನು ಚಿತ್ರರಂಗದಿಂದ ನಿಷೇಧಿಸುವ ಕುರಿತಾಗಿ ವಾಣಿಜ್ಯ ಮಂಡಳಿ ಸಭೆ ಸೇರಿತ್ತು. ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ನಮಗೆ ಈಗ ದರ್ಶನ್ ಗಿಂತ ರೇಣುಕಾಸ್ವಾಮಿ ಕುಟುಂಬಸ್ಥರು ಮುಖ್ಯ. ಅವರ ಮನೆಗೆ ಶನಿವಾರ ಭೇಟಿ ನೀಡುತ್ತೇವೆ ಎಂದಿದ್ದರು.

ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಏನು ಸಹಾಯ ಮಾಡಬಹುದು ಎಂದು ಯೋಚಿಸಿ ಅದರಂತೆ ಸಹಾಯ ಮಾಡಲಿದ್ದೇವೆ. ನಾವೆಲ್ಲರೂ ಚರ್ಚಿಸಿ ಯಾವ ರೀತಿ ಸಹಾಯ ಮಾಡದೋ ನೋಡಿಕೊಂಡು ನಮ್ಮಿಂದಾಗುವಂತಹ ಎಲ್ಲಾ ಸಹಾಯವನ್ನು ಮಾಡಲಿದ್ದೇವೆ ಎಂದಿದ್ದಾರೆ.

ಇನ್ನು ದರ್ಶನ್ ಆರೋಪಿ ಎಂದು ಸಾಬೀತಾದರೆ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಎನ್ ಎಂ ಸುರೇಶ್ ಹೇಳಿದ್ದರು. ಆದರೆ ದರ್ಶನ್ ಜೊತೆಗೆ ಅವರಿಗೆ ಬಂಡವಾಳ ಹಾಕಿದ ನಿರ್ಮಾಪಕರ ಹಿತರಕ್ಷಣೆ ಮಾಡುವುದೂ ನಮಗೆ ಮುಖ್ಯ ಎಂದಿದ್ದಾರೆ. ಪೊಲೀಸರ ಕ್ರಮ ನೋಡಿಕೊಂಡು ನಮ್ಮ ನಿರ್ಧಾರ ತಿಳಿಸಲಿದ್ದೇವೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೇಣುಕಾಸ್ವಾಮಿ ಕೇಸ್: ದರ್ಶನ್ ಆಂಡ್ ಗ್ಯಾಂಗ್ ಇಂದು ಪರಪ್ಪನ ಅಗ್ರಹಾರಕ್ಕೆ