Webdunia - Bharat's app for daily news and videos

Install App

ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧಿಕಾರಿಗಳ ಭೇಟಿ

Krishnaveni K
ಶನಿವಾರ, 15 ಜೂನ್ 2024 (10:07 IST)
ಬೆಂಗಳೂರು: ನಟ ದರ್ಶನ್ ಮತ್ತು ಸ್ನೇಹಿತರು ಮಾಡಿದ ಹಲ್ಲೆಯಿಂದಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಮೊನ್ನೆ ದರ್ಶನ್ ರನ್ನು ಚಿತ್ರರಂಗದಿಂದ ನಿಷೇಧಿಸುವ ಕುರಿತಾಗಿ ವಾಣಿಜ್ಯ ಮಂಡಳಿ ಸಭೆ ಸೇರಿತ್ತು. ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ನಮಗೆ ಈಗ ದರ್ಶನ್ ಗಿಂತ ರೇಣುಕಾಸ್ವಾಮಿ ಕುಟುಂಬಸ್ಥರು ಮುಖ್ಯ. ಅವರ ಮನೆಗೆ ಶನಿವಾರ ಭೇಟಿ ನೀಡುತ್ತೇವೆ ಎಂದಿದ್ದರು.

ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಏನು ಸಹಾಯ ಮಾಡಬಹುದು ಎಂದು ಯೋಚಿಸಿ ಅದರಂತೆ ಸಹಾಯ ಮಾಡಲಿದ್ದೇವೆ. ನಾವೆಲ್ಲರೂ ಚರ್ಚಿಸಿ ಯಾವ ರೀತಿ ಸಹಾಯ ಮಾಡದೋ ನೋಡಿಕೊಂಡು ನಮ್ಮಿಂದಾಗುವಂತಹ ಎಲ್ಲಾ ಸಹಾಯವನ್ನು ಮಾಡಲಿದ್ದೇವೆ ಎಂದಿದ್ದಾರೆ.

ಇನ್ನು ದರ್ಶನ್ ಆರೋಪಿ ಎಂದು ಸಾಬೀತಾದರೆ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಎನ್ ಎಂ ಸುರೇಶ್ ಹೇಳಿದ್ದರು. ಆದರೆ ದರ್ಶನ್ ಜೊತೆಗೆ ಅವರಿಗೆ ಬಂಡವಾಳ ಹಾಕಿದ ನಿರ್ಮಾಪಕರ ಹಿತರಕ್ಷಣೆ ಮಾಡುವುದೂ ನಮಗೆ ಮುಖ್ಯ ಎಂದಿದ್ದಾರೆ. ಪೊಲೀಸರ ಕ್ರಮ ನೋಡಿಕೊಂಡು ನಮ್ಮ ನಿರ್ಧಾರ ತಿಳಿಸಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments