Refresh

This website m-kannada.webdunia.com/article/kannada-cinema-news/karnataka-rajoytsava-award-2023-announced-123103100036_1.html is currently offline. Cloudflare's Always Online™ shows a snapshot of this web page from the Internet Archive's Wayback Machine. To check for the live version, click Refresh.

Select Your Language

Notifications

webdunia
webdunia
webdunia
webdunia

ಹಿರಿಯ ನಟ ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022-23
ಬೆಂಗಳೂರು , ಮಂಗಳವಾರ, 31 ಅಕ್ಟೋಬರ್ 2023 (16:30 IST)
Photo Courtesy: Twitter
ಬೆಂಗಳೂರು: 2022-23 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಚಲನಚಿತ್ರ ಕ್ಷೇತ್ರದಿಂದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ಮತ್ತು ಡಿಂಗ್ರಿ ನಾಗರಾಜ್ ಗೆ ಪ್ರಶಸ್ತಿ ಲಭಿಸಿದೆ.

ಇಷ್ಟು ವರ್ಷಗಳಿಂದ ಚಿತ್ರರಂಗದಲ್ಲಿದ್ದರೂ ಸೂಕ್ತ ಮನ್ನಣೆ ಸಿಕ್ಕಿಲ್ಲ ಎಂದು ಈ ಇಬ್ಬರು ಕಲಾವಿದರಲ್ಲಿ ನೋವಿತ್ತು. ಅದೀಗ ನಿವಾರಣೆಯಾಗಲಿದೆ.

ವಿವಿಧ ಕ್ಷೇತ್ರದ ಒಟ್ಟು 68 ಸಾಧಕರಿಗೆ ಪ್ರಶಸ್ತಿ ಘೋಷಣೆಯಾಗಿದೆ. ಅವರಲ್ಲಿ ಚಲನಚಿತ್ರ ಕ್ಷೇತ್ರದಿಂದ ಈ ಇಬ್ಬರು ನಟರಿಗೆ ಗೌರವ ನೀಡಲಾಗುತ್ತಿದೆ. ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್, ಗಾಲ್ಫರ್ ಅದಿತಿ ಅಶೋಕ್ ಸೇರಿದಂತೆ ಸಾಹಿತ್ಯ, ಕ್ರೀಡೆ, ಸಿನಿಮಾ, ಸಾಮಾಜಿಕ, ಶಿಕ್ಷಣ, ರಂಗಭೂಮಿ ಕ್ಷೇತ್ರದ ವಿವಿಧ ಸಾಧಕರಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ. ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೂ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯಾ ರೈಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಹೊಂಚು