Webdunia - Bharat's app for daily news and videos

Install App

KCC Season4: ಕೆಸಿಸಿ ಗೆದ್ದು ಪುನೀತ್ ರಾಜ್ ಕುಮಾರ್ ಗೆ ಪ್ರಶಸ್ತಿ ಅರ್ಪಿಸಿದ ಗಂಗಾ ವಾರಿಯರ್ಸ್

Webdunia
ಮಂಗಳವಾರ, 26 ಡಿಸೆಂಬರ್ 2023 (09:40 IST)
Photo Courtesy: Twitter
ಬೆಂಗಳೂರು: ಕನ್ನಡ ಚಲನಚಿತ್ರ ಕಪ್ ಸೀಸನ್ 4 ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನೇತೃತ್ವದ ಗಂಗಾ ವಾರಿಯರ್ಸ್ ತಂಡ ಶಿವರಾಜ್ ಕುಮಾರ್ ನೇತೃತ್ವದ ರಾಷ್ಟ್ರಕೂಟ ಪ್ಯಾಂತರ್ಸ್ ವಿರುದ್ಧ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇದು ಎರಡನೇ ಬಾರಿಗೆ ಗಣೇಶ್ ನೇತೃತ್ವದ ತಂಡ ಪ್ರಶಸ್ತಿ ಗೆಲ್ಲುತ್ತಿರುವುದು ವಿಶೇಷ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಕೆಸಿಸಿ ಟೂರ್ನಿಯಲ್ಲಿ ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಡಾಲಿ ಧನಂಜಯ್, ಗೋಲ್ಡನ್ ಸ್ಟಾರ್ ಗಣೇಶ‍್, ದುನಿಯಾ ವಿಜಯ್ ಸೇರಿದಂತೆ ಅನೇಕ ಸಿನಿ ತಾರೆಯರು ಭಾಗವಹಿಸಿದ್ದರು.

ಜೊತೆಗೆ ಪ್ರತೀ ತಂಡದಲ್ಲೂ ಅಂತಾರಾಷ್ಟ್ರೀಯ ತಂಡದಲ್ಲಿ ಆಡಿದ ಅನುಭವವಿರುವ ಆಟಗಾರರಾದ ಸುರೇಶ್ ರೈನಾ, ಮುರಳಿ ವಿಜಯ್, ಹರ್ಷಲ್ ಗಿಬ್ಸ್, ದಿಲ್ಶನ್, ರಾಬಿನ್ ಉತ್ತಪ್ಪ ಸೇರಿದಂತೆ ಸ್ಟಾರ್ ಗಳೂ ಭಾಗಿಯಾಗಿದ್ದರು.

ಅಂತಿಮ ಪಂದ್ಯ ಗೆದ್ದ ಗಣೇಶ್ ನೇತೃತ್ವದ ತಂಡಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ ವಿತರಿಸಿದರು. ಬಳಿಕ ಗಂಗಾ ವಾರಿಯರ್ಸ್ ಈ ಪ್ರಶಸ್ತಿಯನ್ನು ನಟ ಪುನೀತ್ ರಾಜ್ ಕುಮಾರ್ ಗೆ ಅರ್ಪಿಸಿ ಗಮನ ಸೆಳೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments