Webdunia - Bharat's app for daily news and videos

Install App

25 ದಿನಗಳ ಸಂಭ್ರಮದಲ್ಲಿದೆ ಕೆಂಡ ಸಂಪಿಗೆ ತಂಡ

Webdunia
ಬುಧವಾರ, 7 ಅಕ್ಟೋಬರ್ 2015 (11:22 IST)
ದುನಿಯಾ ಸೂರಿ ಅವರ ವಿಭಿನ್ನ ಪ್ರಯೋಗ ಕೆಂಡಸಂಪಿಗೆಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೂರಿಯ ಸಿನಿಮಾಕ್ಕೆ ಈಗಾಗಲೇ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ನಾಲ್ಕನೇ ವಾರವೂ ಚಿತ್ರಮಂದಿರಗಳಲ್ಲಿ ಕೆಂಡ ಸಂಪಿಗೆಯ ನಾಗಾಲೋಟ ಹಾಗೇ ಮುಂದುವರೆದಿದೆ.
ಸದ್ಯ 50ನೇ ದಿನದತ್ತ ಮುನ್ನುಗ್ಗುತ್ತಿರುವ ಕೆಂಡಸಂಪಿಗೆ ಸಿನಿಮಾಕ್ಕೆ ದಿನೇ ದಿನೇ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ. ಕ್ಲಾಸ್ , ಮಾಸ್ , ಫ್ಯಾಮಿಲಿ ಹೀಗೆ ಎಲ್ಲಾ ಅಂಶಗಳು ಸಿನಿಮಾದಲ್ಲಿರೋದರಿಂದ  ಚಿತ್ರ ಎಲ್ಲರಿಗೂ ಇಷ್ಟವಾಗುತ್ತಿದೆ. ಈಗಾಗಲೇ ಚಿತ್ರ ಹಾಕಿದಜ ಬಂಡವಾಳಕ್ಕಿಂತ ಎರಡು ಪಟ್ಟು ಹೆಚ್ಚು ಆದಾಯವನ್ನು ಚಿತ್ರತಂಡಕ್ಕೆ ತಂದು ಕೊಟ್ಟಿದೆಯಂತೆ.
 
ಅಪರಾಧ ಜಗತ್ತಿನ ಎಲ್ಲೆಯನ್ನು ಇಟ್ಟುಕೊಂಡು ಮಾಡಿರುವ ಈ ಸಿನಿಮಾದಲ್ಲಿ  ಪ್ರಥಮ ಬಾರಿಗೆ ಮಾನ್ವಿತಾ ಹರೀಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ನಾಯಕ ವಿಕ್ಕಿಗೂ ಇದು ಮೊದಲ ಸಿನಿಮಾ. ಕರ್ನಾಟಕದ 18 ಜಿಲ್ಲೆಗಳಲ್ಲಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದ್ದು, ವಿ. ಹರಿಕೃಷ್ಣ ಇದಕ್ಕೆ ಸಂಗೀತ ಸಂಯೋಜಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments