Webdunia - Bharat's app for daily news and videos

Install App

ವಿಜಯ್ ದೇವರಕೊಂಡ ಭೇಟಿಯಾದ ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್... ಹೊಸ ಪ್ರಾಜೆಕ್ಟ್‌ ಎಂದಾ ಅಭಿಮಾನಿಗಳು

Sampriya
ಬುಧವಾರ, 24 ಏಪ್ರಿಲ್ 2024 (20:04 IST)
Photo Courtesy X
ಸಲಾರ್ ಸಿನಿಮಾದ ನಂತರ ನಿರ್ದೇಶಕ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್‌ಟಿಆರ್ ಜತೆ  ಹೊಸ ಸಿನಿಮಾ ಮಾಡಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.  ಆದರೆ ಇದೀಗ ಕೆಜಿಎಫ್ ನಿರ್ದೇಶಕ ಮತ್ತೋರ್ವ ಟಾಲಿವುಡ್ ಸ್ಟಾರ್ ನಟನಿಗೆ  ಆ್ಯಕ್ಷನ್ ಕಟ್ ಹೇಳಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.

ಹೌದು ಈ ರೀತಿ ಸುದ್ದಿ ಹಬ್ಬಲು ವಿಜಯ್ ದೇವರಕೊಂಡ ಹಾಗೂ ಪ್ರಶಾಂತ್ ನೀಲ್ ಅವರ ಭೇಟಿಯೇ ಇದಕ್ಕೆಲ್ಲ ಕಾರಣ. ಇವರಿಬ್ಬರ ಭೇಟಿ ಟಾಲಿವುಡ್ ಅಂಗಳದಲ್ಲಿ ಹಾಗೂ ಅವರ ಅಭಿಮಾನಿಗಳಲ್ಲಿ ಹೊಸ ಊಹಾಪೋಹಗೆ ಕಾರಣವಾಗಿದೆ.

ಆದರೆ ಇವರಿಬ್ಬರ ಭೇಟಿ ಕೇವಲ ಭೋಜನಕ್ಕೆ ಸೀಮಿತ ಎಂದು ಹೇಳಿದ್ದರು, ಟಾಲಿವುಡ್ ಅಂಗಳದಲ್ಲಿ ಮಾತ್ರ ಇವರಿಬ್ಬರು ಹೊಸ ಪ್ರಾಜೆಕ್ಟ್‌ನಲ್ಲಿ ತೊಡಗಿದ್ದಾರೆ ಎಂದು ವದಂತಿಗಳು ಹರಿದಾಡುತ್ತಿದೆ.

ಪ್ರಶಾಂತ್ ನೀಲ್ ಈಗಾಗಲೇ ಪ್ರಭಾಸ್ ಜೊತೆಗೆ "ಸಲಾರ್: ಭಾಗ 2" ಮತ್ತು ಎನ್‌ಟಿಆರ್‌ನೊಂದಿಗೆ ಹೊಸ ಸಿನಿಮಾ ಮಾಡುತ್ತಿದ್ದಾರೆ.

ಇನ್ನೂ ಕೆಲವರು ಪ್ರಶಾಂತ್ ನೀಲ್ ಅಭಿನಯದ "ಸಲಾರ್: ಭಾಗ 2" ಅಥವಾ ಎನ್‌ಟಿಆರ್ ಅವರ ಹೊಸ ಚಿತ್ರದಲ್ಲಿ ವಿಜಯ್ ದೇವರಕೊಂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂದು ಗೆಸ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments