ಜಾಲಿವುಡ್‌ ಸ್ಟುಡಿಯೋದಲ್ಲಿ ನಡೆದ ಹೈಡ್ರಾಮಾ ಕುರಿತು ಮೌನ ಮುರಿದ ಕಿಚ್ಚ ಸುದೀಪ್‌

Sampriya
ಭಾನುವಾರ, 12 ಅಕ್ಟೋಬರ್ 2025 (10:12 IST)
ಬೆಂಗಳೂರು: ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್ ಬಾಸ್ ಸುಲಭವಾಗಿ ನಿಲ್ಲಲ್ಲ ಎಂದು ಜಾಲಿವುಡ್‌ ಸ್ಟುಡಿಯೋದಲ್ಲಿ ಈಚೆಗೆ ನಡೆದ ಹೈಡ್ರಾಮಾದ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದಾರೆ. 

ಅಲ್ಲಿ ನಡೆದ ಘಟನೆಗೂ ಬಿಗ್‌ ಬಾಸ್‌ಶೋಗೂ ಯಾವುದೇ ಸಂಬಂಧ ಇಲ್ಲ. ಬಿಗ್ ಬಾಸ್ ಎಷ್ಟೋ ಜನಕ್ಕೆ ಅನ್ನಹಾಕಿದೆ, ದಾರಿದೀಪ ಆಗಿದೆ. ಅತಿದೊಡ್ಡ ಶೋ ಕೆಲವರ ಕಣ್ಣು ಕುಕ್ಕುತ್ತಾ ಇರುತ್ತೆ. ಖಾಲಿ ಜಾಗಕ್ಕೆ ಬಿಗ್ ಬಾಸ್ ಅನ್ನೋ ಹೆಸರಿಟ್ಟರೂ ಅದಕ್ಕೊಂದು ತೂಕ ಇದೆ ಎಂದು ತಿರುಗೇಟು ನೀಡಿದರು.

ಹೈಡ್ರಾಮಾದ ಬಳಿಕ ಜಾಲಿವುಡ್‌ ಸ್ಟುಡಿಯೋ ಮತ್ತೆ ತೆರೆಯಲು ಅನುಮತಿ ನೀಡಿದ ಬಳಿಕ ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಶುರುವಾಗಿದೆ. ಬಿಗ್​​ಬಾಸ್ ಕನ್ನಡ ಸೀಸನ್ 12ರ ಎರಡನೇ ವಾರದ ಪಂಚಾಯಿತಿ ಶನಿವಾರ ನಡೆಯಿತು.

ಇದೇ ವೇಳೆ ವಿವಾದದ ಬಗ್ಗೆ ಕಿಚ್ಚ ಸುದೀಪ್‌ ಪ್ರತಿಕ್ರಿಯೆ ನೀಡಿದರು. ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್ ಬಾಸ್ ಸುಲಭವಾಗಿ ನಿಲ್ಲಲ್ಲ. ಇಲ್ಲಿ ಆಗಿದ್ದೇ ಬೇರೆ.. ಹೊರಗಡೆ ನಡಿತಾ ಇದ್ದಿದ್ದೆ ಬೇರೆ. ಇಲ್ಲಿ ನಡೆದಿರುವ ವಿಚಾರಕ್ಕೂ ಬಿಗ್‌ ಬಾಸ್‌ಗೂ, ಕಲರ್ಸ್‌ ಕನ್ನಡಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು.

ವಿವಾದ ಬಂದಿದ್ದು ನಾವು ಶೋ ನಡೆಸುತ್ತಿದ್ದ ಜಾಗದ್ದು. ಕೆಲವೊಮ್ಮೆ ಖಾಲಿ ಜಾಗಕ್ಕೆ ಒಂದು ಅಡ್ರೆಸ್‌ ಬೇಕಾಗುತ್ತೆ. ಆ ಅಡ್ರೆಸ್ಸೆ ಬಿಸ್‌ ಬಾಸ್‌ ಆಗಿ ಹೋಯ್ತು ಅಂತ ಸ್ಪಷ್ಟನೆ ನೀಡಿದರು.

ಇಂತಹ ಸಂದರ್ಭದಲ್ಲಿ ಶೋ ಮತ್ತೆ ಶುರುವಾಗಲು ಕಾರಣರಾದ ಡಿಕೆ ಸಾಹೇಬ್ರಿಗೆ ಹಾಗೂ ನನ್ನ ಸ್ನೇಹಿತ ನಲಪಾಡ್‌ ಅವರಿಗೆ ಧನ್ಯವಾದ ಹೇಳಲೇಬೇಕು. ಹಾಗೆಯೇ ಸಪೋರ್ಟ್‌ ಮಾಡಿದ ಆಡಳಿತ ಮಂಡಳಿಯ ಎಲ್ಲರಿಗೂ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments