Select Your Language

Notifications

webdunia
webdunia
webdunia
webdunia

ಅನಾರೋಗ್ಯದ ಕಾರಣ ಪ್ರೆಸ್ ಮೀಟ್ ರದ್ದುಗೊಳಿಸಿದ ಕಿಚ್ಚ ಸುದೀಪ್

ಅನಾರೋಗ್ಯದ ಕಾರಣ ಪ್ರೆಸ್ ಮೀಟ್ ರದ್ದುಗೊಳಿಸಿದ ಕಿಚ್ಚ ಸುದೀಪ್
ಬೆಂಗಳೂರು , ಗುರುವಾರ, 21 ಜುಲೈ 2022 (15:44 IST)
ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಕಿಚ್ಚ ಸುದೀಪ್ ಈಗಾಗಲೇ ನಿಗದಿಯಾಗಿದ್ದ ವಿಕ್ರಾಂತ್ ರೋಣ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಾರೆ.

ಕೆಲವು ದಿನಗಳಿಂದ ನಿರಂತರವಾಗಿ ವಿಕ್ರಾಂತ್ ರೋಣ ಪ್ರಚಾರಕ್ಕಾಗಿ ಓಡಾಟ ನಡೆಸಿದ್ದ ಸುದೀಪ್ ಈಗ ಜ್ವರದಿಂದ ಬಳಲುತ್ತಿದ್ದಾರೆ. ಸದ್ಯಕ್ಕೆ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಕೊಚ್ಚಿ, ಹೈದರಾಬಾದ್, ದೆಹಲಿ, ಚೆನ್ನೈ ಮಾಧ್ಯಮಗಳಿಗಾಗಿ ಸುದೀಪ್ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಬೇಕಿತ್ತು. ಅಲ್ಲದೆ ವಿಜಯ ಟಿವಿಯ ಶೋ ಒಂದರಲ್ಲಿ ಪಾಲ್ಗೊಳ್ಳಬೇಕಾಗಿತ್ತು.

ಆದರೆ ಅನಾರೋಗ್ಯದ ನಿಮಿತ್ತ ಈ ಎಲ್ಲಾ ಕಾರ್ಯಕ್ರಮಗಳಿಂದ ದೂರವುಳಿಯಲು ಸುದೀಪ್ ತೀರ್ಮಾನಿಸಿದ್ದಾರೆ. ಇದಕ್ಕಾಗಿ ಮಾಧ‍್ಯಮ ಮಿತ್ರರಲ್ಲಿ ಕ್ಷಮೆ ಕೋರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಟಿಟಿಯಲ್ಲಿ ಗಾರ್ಗಿ ರಿಲೀಸ್ ಯಾವಾಗ?