Webdunia - Bharat's app for daily news and videos

Install App

ಒಪ್ಪಿಕೊಂಡ ಕಾರ್ಯಕ್ರಮ ತಪ್ಪಿಸಲ್ಲ: ಅಭಿಮಾನಿಗಳ ದಾಂಧಲೆಗೆ ಕಿಚ್ಚ ಸುದೀಪ್ ಸ್ಪಷ್ಟನೆ

Webdunia
ಶುಕ್ರವಾರ, 10 ಫೆಬ್ರವರಿ 2023 (08:50 IST)
Photo Courtesy: Twitter
ದಾವಣಗೆರೆ: ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚ ಸುದೀಪ್ ಬರಲಿಲ್ಲ ಎಂದು ದಾಂಧಲೆ ನಡೆಸಿದ ಅಭಿಮಾನಿಗಳಿಗೆ ಸ್ವತಃ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

‘ಸ್ನೇಹಿತರಿಗೆ ನಮಸ್ಕಾರ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆದ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸುವವನಲ್ಲ. ಆದರೂ ಇಂದು ನಡೆದ ಘಟನೆ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಸದಾ ಅತೀವ ಆಸೆ. ಮುಂದೆ ಖಂಡಿತಾ ಬರುವೆ. ಪ್ರೀತಿ ಇರಲಿ. ಶಾಂತ ರೀತಿಯಿಂದ ವರ್ತಿಸಿ’ ಎಂದು ಸುದೀಪ್ ಮನವಿ ಮಾಡಿದ್ದಾರೆ.

ಘಟನೆ ಹಿನ್ನಲೆ: ದಾವಣಗೆರೆಯಲ್ಲಿ ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚ ಸುದೀಪ್ ಬರುತ್ತಾರೆಂದು ಸುದ್ದಿ ಹಬ್ಬಿತ್ತು. ಹೀಗಾಗಿ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ಆದರೆ ಸುದೀಪ್ ಬರಲಿಲ್ಲವೆಂದು ರೊಚ್ಚಿಗೆದ್ದ ಅಭಿಮಾನಿಗಳು ಕುರ್ಚಿಗಳನ್ನು ಮುರಿದು, ಘೋಷಣೆ ಕೂಗಿ ದಾಂಧಲೆ ಮಾಡಿದರು.

ಆದರೆ ಸುದೀಪ್ ‍ ನಿವಾಸಕ್ಕೆ ತೆರಳಿ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಆಹ್ವಾನ ನೀಡಿದ್ದರು. ಆದರೆ ಆಗ ಸುದೀಪ್ ಇರಲಿಲ್ಲ. ಹೀಗಾಗಿ ಅವರ ತಂದೆ ಕೈಗೆ ಆಹ್ವಾನ ನೀಡಿದ್ದರು. ಆದರೆ ಇದರ ಬಗ್ಗೆ ಸುದೀಪ್ ಗೆ ಮಾಹಿತಿಯಿರಲಿಲ್ಲವೆನಿಸುತ್ತದೆ. ಅಂತೂ ಆಹ್ವಾನ ಕುರಿತ ಗೊಂದಲದಿಂದಾಗಿ ಇಷ್ಟೆಲ್ಲಾ ರದ್ದಾಂತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments