Webdunia - Bharat's app for daily news and videos

Install App

ಕೆಜಿಎಫ್ 2 ವಿವಾದದ ಬಗ್ಗೆ ಕೊನೆಗೂ ಖಡಕ್ ಉತ್ತರ ಕೊಟ್ಟ ಕಿಚ್ಚ ಸುದೀಪ್

Webdunia
ಮಂಗಳವಾರ, 26 ಏಪ್ರಿಲ್ 2022 (08:20 IST)
ಬೆಂಗಳೂರು: ಕೆಜಿಎಫ್ 2 ಬಿಡುಗಡೆಯಾದ ಸಂದರ್ಭದಲ್ಲಿ ಯಾರೋ ಕಿಡಿಕೇಡಿಗಳು ಕಿಚ್ಚ ಸುದೀಪ್ ಹಿಂದೆ ನೀಡಿದ್ದ ಹೇಳಿಕೆಯ ವಿಡಿಯೋ ಎಡಿಟ್ ಮಾಡಿ ವಿವಾದ ಸೃಷ್ಟಿಸಿದ್ದರು. ಅದಕ್ಕೀಗ ಸುದೀಪ್ ಖಡಕ್ ಉತ್ತರ ಕೊಟ್ಟಿದ್ದಾರೆ.

ಸುದೀಪ್ ಹಿಂದೊಮ್ಮೆ ಪತ್ರಕರ್ತರು ಕೆಜಿಎಫ್ ಸಿನಿಮಾ ಬಗ್ಗೆ ಹೇಳಿ ಎಂದಾಗ ನಾನು ಅದರಲ್ಲಿ ಇಲ್ಲ ಎಂದು ಹೇಳಿದ್ದನ್ನೇ ಎಡಿಟ್ ಮಾಡಿ ವಿವಾದ ಸೃಷ್ಟಿಸಿದ್ದರು.

ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಸುದೀಪ್ ‘ನಾನು ಇಲ್ಲದೇ ಇರುವ ಪರೀಕ್ಷೆ ಬಗ್ಗೆ ಉತ್ತರ ಕೊಡುವ ಅಗತ್ಯ ನನಗಿಲ್ಲ. ಆವತ್ತು ಗೋವಾ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡಿಗ ಪತ್ರಕರ್ತರೊಬ್ಬರು ನನ್ನ ಬಳಿ ಬಂದು ಮಾತಾಡಿಸಿದ್ದರು. ಕರ್ನಾಟಕದವನು ಎಂಬ ಕಾರಣಕ್ಕೆ ನಾನು ಅವರನ್ನು ಮಾತನಾಡಿಸಿದ್ದೆ. ಆಗ ಅವರು ಕೆಜಿಎಫ್ ಬಗ್ಗೆ ಏನು ಹೇಳ್ತೀರಿ ಎಂದು ಕೇಳಿದರು. ಅದಕ್ಕೆ ನಾನು ಆ ಸಿನಿಮಾದಲ್ಲಿ ಇರಲಿಲ್ಲ ಎಂದೆ. ಮತ್ತೆ ಅದಕ್ಕೆ ವಿವರಣೆಯನ್ನೂ ಕೊಟ್ಟೆ. ಆವತ್ತು ನಾನು ಕನ್ನಡ ಸಿನಿಮಾದ ಪ್ರತಿನಿಧಿಯಾಗಿ ಅಲ್ಲಿಗೆ ಹೋಗಿದ್ದೆ. ಆಗ ನಾನು ನನ್ನ ಸಿನಿಮಾ ಬಗ್ಗೆಯೂ ಮಾತಾಡುವ ಸ್ಥಿತಿಯಲ್ಲಿರಲಿಲ್ಲ.

ಆದರೆ ಇದನ್ನೇ ಯಾರೋ ಕಿಡಿಗೇಡಿಗಳು ಎಡಿಟ್ ಮಾಡಿ ಕಿರಿಕ್ ಮಾಡಿದ್ರು. ನಾನು ಜೀವನದಲ್ಲಿ ಮಾಡಿದ ದೊಡ್ಡ ಸಂಪಾದನೆ ಎಂದರೆ ನನ್ನ ಜನ. ಇಂತಹ ಕಿರಿಕ್ ಗಳಿಗೆ ಅವರೇ ಉತ್ತರ ಕೊಟ್ಟರು. ಇಂತಹದ್ದಕ್ಕೆಲ್ಲಾ ತಲೆಯೇ ಕೆಡಿಸಿಕೊಳ್ಳಲ್ಲ’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments