Webdunia - Bharat's app for daily news and videos

Install App

ನೆರೆ ಸಂತ್ರಸ್ತರಿಗೆ ಪರಿಸ್ಥಿತಿ ಹೇಗಿದೆ ಹೇಳಿ! ನನ್ನ ಕೈಲಾಗಿದ್ದನ್ನು ಮಾಡ್ತೀನಿ ಎಂದು ಮನವಿ ಮಾಡಿದ ಕಿಚ್ಚ ಸುದೀಪ್

Webdunia
ಗುರುವಾರ, 8 ಆಗಸ್ಟ್ 2019 (09:51 IST)
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ವಿಪರೀತ ಮಳೆಯಿಂದಾಗಿ ಹಲವು ಜಿಲ್ಲೆ, ಹಳ್ಳಿಗಳು ಜಲಾವೃತವಾಗಿವೆ. ಜನರ ಈ ಸಂಕಷ್ಟ ಪರಿಸ್ಥಿತಿಗೆ ನೆರವಾಗಲು ಸೆಲೆಬ್ರಿಟಿಗಳೂ ಮುಂದೆ ಬರುತ್ತಿದ್ದಾರೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಇದೀಗ ಕಿಚ್ಚ ಸುದೀಪ್ ಕೂಡಾ ಸಹಾಯ ಹಸ್ತ ಚಾಚಲು ಮುಂದಾಗಿದ್ದಾರೆ. ಸುದೀಪ್ ತಮ್ಮ ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿದ್ದು, ಅಲ್ಲಿ ಅಕ್ಕಪಕ್ಕ ಇರುವವರು ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಹೇಗಿದೆ ಎಂದು ನನಗೆ ತಿಳಿಸಿ. ನನ್ನ ಕೈಲಾದ ಸಹಾಯ ಮಾಡಲು ಪ್ರಯತ್ನ ಪಡುತ್ತೇನೆ ಎಂದು ಮನವಿ ಮಾಡಿದ್ದಾರೆ.

ಅಲ್ಲಿ ಅಕ್ಕಪಕ್ಕದವರು ಹೋಗಿ ಪರಿಸ್ಥಿತಿ ತಿಳಿದುಕೊಳ್ಳಬಹುದು ಎಂದು ಹೀಗೆ ಹೇಳುತ್ತಿದ್ದೇನೆ. ದಯವಿಟ್ಟು ಯಾರೂ ತಪ್ಪು ತಿಳಿದುಕೊಳ್ಳಬೇಡಿ. ನಮ್ಮ ಕೈಲಿ ಏನು ಸಹಾಯ ಸಾಧ್ಯವೋ ಅದೆಲ್ಲವನ್ನೂ ಮಾಡೋಣ. ಇದನ್ನು ನನ್ನ ಮನವಿ ಎಂದುಕೊಳ್ಳಿ ಎಂದು ಸುದೀಪ್ ವಿನಂತಿಸಿದ್ದಾರೆ. ಕಿಚ್ಚನ ಈ ವಿಡಿಯೋ ಸಂದೇಶಕ್ಕೆ ಹಲವು ಅಭಿಮಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments