Select Your Language

Notifications

webdunia
webdunia
webdunia
webdunia

ಚಾಮರಾಜನಗರ ದುರಂತ: ಮೃತರ ಕುಟುಂಬಕ್ಕೆ ಕಿಚ್ಚ ಸುದೀಪ್ ನೆರವು

ಚಾಮರಾಜನಗರ ದುರಂತ: ಮೃತರ ಕುಟುಂಬಕ್ಕೆ ಕಿಚ್ಚ ಸುದೀಪ್ ನೆರವು
ಬೆಂಗಳೂರು , ಭಾನುವಾರ, 9 ಮೇ 2021 (09:21 IST)
ಬೆಂಗಳೂರು: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ನಟ ಕಿಚ್ಚ ಸುದೀಪ್ ನೆರವಾಗಿದ್ದಾರೆ.


ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸುದೀಪ್ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ನೆರವಾಗಿದ್ದಾರೆ.

ಮೃತರ ಕುಟುಂಬಕ್ಕೆ ಆರ್ಥಿಕವಾಗಿ ಮತ್ತು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಭರವಸೆಯನ್ನು ಸುದೀಪ್ ನೀಡಿದ್ದಾರೆ. ಕಿಚ್ಚ ಸುದೀಪ್ ಟ್ರಸ್ಟ್ ನ ಸದಸ್ಯರು ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳುವ ಕೆಲಸ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಶೋ ರದ್ದು: ಇಂದು ಸ್ಪರ್ಧಿಗಳು ಹೊರಕ್ಕೆ