Select Your Language

Notifications

webdunia
webdunia
webdunia
webdunia

ಒಳ್ಳೆಯತನ ದುರುಪಯೋಗದ ಸಾಧನವಲ್ಲ: ಆರೋಪಗಳಿಗೆ ಕಿಚ್ಚ ಸುದೀಪ್ ತಿರುಗೇಟು

ಒಳ್ಳೆಯತನ ದುರುಪಯೋಗದ ಸಾಧನವಲ್ಲ: ಆರೋಪಗಳಿಗೆ ಕಿಚ್ಚ ಸುದೀಪ್ ತಿರುಗೇಟು
ಬೆಂಗಳೂರು , ಮಂಗಳವಾರ, 4 ಜುಲೈ 2023 (16:02 IST)
Photo Courtesy: Twitter
ಬೆಂಗಳೂರು: ತಮ್ಮ ಬಗ್ಗೆ ನಿರ್ಮಾಪಕ ಎಂ.ಎನ್ ಕುಮಾರ್ ಮಾಡಿದ ಆರೋಪಗಳಿಗೆ ಕಿಚ್ಚ ಸುದೀಪ್ ಟ್ವಿಟರ್ ಮೂಲಕ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸುದೀಪ್ ಸಿನಿಮಾ ಮಾಡುವುದಾಗಿ ಹಣ ಪಡೆದು ಈಗ ಡೇಟ್ಸ್ ಕೊಡದೇ ಸತಾಯಿಸುತ್ತಿದ್ದಾರೆ ಎಂದು ಕುಮಾರ್ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪಗಳ ಬಗ್ಗೆ ಸುದೀಪ್ ನೇರವಾಗಿ ಪ್ರತಿಕ್ರಿಯಿಸದೇ ಇದ್ದರೂ ಇಂದು ಪರೋಕ್ಷವಾಗಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಆಂಗ್ಲ ಭಾಷೆಯ ಮಾತೊಂದನ್ನು ಉಲ್ಲೇಖಿಸಿರುವ ಕಿಚ್ಚ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ‘ಇದು ನಿಮಗೆ ತಿಳಿದಿರಲಿ. ಒಳ್ಳೆಯತನವು ಕುಶಲತೆ ಮತ್ತು ದುರುಪಯೋಗದ ಸಾಧನವಲ್ಲ. ಅದು ನಿಜವಾಗಿ ಪ್ರಕಾಶಮಾನವಾಗಿ ಹೊಳೆಯುತ್ತದೆ. ಮತ್ತು ದುರಹಂಕಾರವು ಅದರ ಪ್ರಕಾಶವನ್ನು ಹಾಳುಮಾಡಲು ನಾನು ಬಿಡುವುದಿಲ್ಲ. ವಿನಮ್ರರಾಗಿರಿ ಮತ್ತು ಸತ್ಯವಂತರಾಗಿರಿ’ ಎಂದು ಅರ್ಥ ಬರುವ ಮಾತೊಂದನ್ನು ಪೋಸ್ಟ್ ಮಾಡಿರುವ ಸುದೀಪ್ ಈ ಕೋಟ್ ನನಗೆ ಇಷ್ಟವಾಯಿತು. ನೀವೂ ಓದಿ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯಕ್ಕಾಗಿ ಸಿನಿಮಾಗೆ 3 ವರ್ಷ ಬ್ರೇಕ್ ಪಡೆದುಕೊಳ್ತಾರಾ ದಳಪತಿ ವಿಜಯ್?