Webdunia - Bharat's app for daily news and videos

Install App

ಬೆಳ್ಳಂ ಬೆಳಿಗ್ಗೆ ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್: ಕಾರಣ ಇಲ್ಲಿದೆ

Krishnaveni K
ಗುರುವಾರ, 6 ಫೆಬ್ರವರಿ 2025 (11:31 IST)
Photo Credit: X
ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ನಟ ಕಿಚ್ಚ ಸುದೀಪ್ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೆ ಕಾರಣ ಏನೆಂಬ ವಿವರ ಇಲ್ಲಿದೆ ನೋಡಿ.

ಕಿಚ್ಚ ಸುದೀಪ್ ರಾಜಕೀಯದಿಂದ ಆದಷ್ಟು ದೂರವೇ ಇರುತ್ತಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾತ್ರ ತಮ್ಮ ಆಪ್ತರು ಎಂಬ ಕಾರಣಕ್ಕೆ ಬಿಜೆಪಿ ನಾಯಕ ಬಸವರಾಜ್ ಬೊಮ್ಮಾಯಿ ಪರ ಪ್ರಚಾರ ನಡೆಸಿದ್ದರು. ಅದು ಬಿಟ್ಟರೆ ಅವರು ರಾಜಕೀಯದಿಂದ ದೂರವೇ ಇದ್ದಾರೆ.

ಈ ನಡುವೆ ಇಂದು ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಬಂದಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಯಿತು. ಆದರೆ ಡಿಕೆಶಿ ಭೇಟಿಯಾಗಿರುವುದಕ್ಕೂ ಕಾರಣವಿದೆ. ಅದು ಸಿಸಿಎಲ್ ಕ್ರಿಕೆಟ್ ಲೀಗ್ ಎನ್ನಲಾಗಿದೆ.

ಇನ್ನೇನು ಬಹುಭಾಷೆಗಳ ಸಿನಿಮಾ ಕಲಾವಿದರು ಭಾಗಿಯಾಗುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಆರಂಭವಾಗಲಿದ್ದು ಅದರ ಉದ್ಘಾಟನೆಗೆ ಡಿಕೆಶಿಗೆ ಆಹ್ವಾನ ನೀಡಲು ಬಂದಿದ್ದಾರೆ ಎನ್ನಲಾಗಿದೆ. ಈಗಾಗಲೇ ಸುದೀಪ್ ಸೇರಿದಂತೆ ಸಿಸಿಎಲ್ ನಲ್ಲಿ ಆಡಲಿರುವ ಕರ್ನಾಟಕ ತಂಡದ ಕಲಾವಿದರು ಅಭ್ಯಾಸ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments