Webdunia - Bharat's app for daily news and videos

Install App

ಮತ್ತೆ ಬೇಕೆಂದ್ರೂ ಸಿಗಲ್ಲ, ಈಗಲೇ ಅನುಭವಿಸಿ: ಪುನೀತ್ ಲಕ್ಕಿಮ್ಯಾನ್ ಬಗ್ಗೆ ಸುದೀಪ್ ಮಾತು

Webdunia
ಬುಧವಾರ, 24 ಆಗಸ್ಟ್ 2022 (09:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಅಭಿನಯಿಸಿರುವ ಲಕ್ಕಿಮ್ಯಾನ್ ಸಿನಿಮಾದ ಹಾಡು ನಿನ್ನೆ ಬಿಡುಗಡೆಯಾಗಿದೆ. ಈ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಗಣ್ಯರು, ಪ್ರಭುದೇವ ಕುಟುಂಬದವರು ಸಾಕ್ಷಿಯಾಗಿದ್ದರು.

ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದ ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಹಾಡೊಂದಕ್ಕೆ ಪ್ರಭುದೇವ-ಅಪ್ಪು ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಆ ಹಾಡಿನ ಲಿರಿಕಲ್ ವಿಡಿಯೋ ನಿನ್ನೆ ಬಿಡುಗಡೆಯಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಭುದೇವ, ವಿಜಯ್ ಆಂಟನಿ, ಮೂಗೂರ್ ಸುಂದರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್, ಸಾಧು ಕೋಕಿಲ, ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿ ಸಂಗೀತಾ ಸೇರಿದಂತೆ ಅನೇಕರು ಹಾಜರಾಗಿದ್ದರು.

ಈ ವೇಳೆ ಚಿತ್ರಕ್ಕೆ ಶುಭ ಹಾರೈಸಿ ಮಾತನಾಡಿದ ಕಿಚ್ಚ ಸುದೀಪ್ ಅಪ್ಪು ನೆನೆದು ಭಾವುಕರಾದರು. ‘ಈ ಹಾಡು ನೋಡುವಾಗ ನನಗೆ ದುಃಖವಾಗಲಿಲ್ಲ. ನಾನು ಅಪ್ಪು ನೋಡಿ ನಗುತ್ತಿದ್ದೆ. ಕಾರಣ, ಈ ಅವಕಾಶ ಮತ್ತೆ ಸಿಗಲ್ಲ. ಈಗಲೇ ಅನುಭವಿಸಿ. ಅವರನ್ನು ಕೊನೆಯ ಬಾರಿಗೆ ತೆರೆ ಮೇಲೆ ನೋಡುವ, ಸಂಭ್ರಮಿಸುವ ಕೊನೇ ಅವಕಾಶ ನಮಗಿದು. ಇದನ್ನು ಮಿಸ್ ಮಾಡಬೇಡಿ’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments