Webdunia - Bharat's app for daily news and videos

Install App

ಥಿಯೇಟರ್ ಸಮಸ್ಯೆ: ಕಿಚ್ಚ ಸುದೀಪ್ ಮಾತಿಗೆ ಪುನೀತ್ ಅಭಿಮಾನಿಗಳ ಕಿಡಿ

Webdunia
ಭಾನುವಾರ, 4 ಏಪ್ರಿಲ್ 2021 (09:45 IST)
ಬೆಂಗಳೂರು: ಥಿಯೇಟರ್ ಗಳಲ್ಲಿ ಮತ್ತೆ ಶೇ.50 ಮಂದಿ ಹಾಜರಾತಿಗೆ ಅವಕಾಶ ಕೊಟ್ಟ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯವನ್ನು ಟ್ವಿಟರ್ ಮೂಲಕ ಹೊರಹಾಕಿದ್ದರು. ಆದರೆ ಕಿಚ್ಚನ ಮಾತು ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.


ಸರ್ಕಾರದ ನಿರ್ಧಾರದ ಬಗ್ಗೆ ಯುವರತ್ನ ಚಿತ್ರತಂಡ ಈಗಾಗಲೇ ಬೇಸರ ಹೊರಹಾಕಿತ್ತು. ಆದರೆ ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಸರ್ಕಾರದ ನಿರ್ಧಾರವನ್ನು ಸಂಪೂರ್ಣ ತಪ್ಪು ಎಂದು ಹೇಳಲೂ ಆಗದು ಎಂದಿದ್ದರು.

‘ಮತ್ತೆ ಶೇ.50 ಪ್ರೇಕ್ಷಕರಿಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರ ಚಿತ್ರರಂಗದ ಮಟ್ಟಿಗೆ ಶಾಕಿಂಗ್. ಆದರೆ ಇದರ ಹಿಂದಿನ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನಿರ್ಧಾರವನ್ನು ಗೌರವಿಸುವುದೂ ನಮ್ಮ ಕರ್ತವ್ಯ. ಈ ಪರಿಸ್ಥಿತಿಯಂದ ಹೊರಬಂದು ವಿಜಯಿಯಾಗಲು ಯುವರತ್ನ ಚಿತ್ರತಂಡಕ್ಕೆ ಹಾರೈಸುವೆ’ ಎಂದು ಸುದೀಪ್ ಹೇಳಿದ್ದರು.

ಇದು ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಯುವರತ್ನ ತಂಡದ ಪರ ನಿಲ್ಲದೇ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವುದಕ್ಕೆ ಕಿಚ್ಚನ ವಿರುದ್ಧ ಅಭಿಮಾನಿಗಳು ಕಿಡಿ ಕಾರಿದ್ದಾರೆ. ಇತ್ತೀಚೆಗೆ ನೀವು ಸಿಎಂ ಭೇಟಿಯಾಗಿದ್ದಕ್ಕೆ ಸರಿಯಾಗಿಯೇ ಕೃತಜ್ಞತೆ ಸಲ್ಲಿಸಿದಿರಿ ಎಂದು ಪುನೀತ್ ಅಭಿಮಾನಿಗಳು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments