Select Your Language

Notifications

webdunia
webdunia
webdunia
webdunia

ಬೆದರಿಕೆ ಪತ್ರ ಬರೆದವರಿಗೆ ತಕ್ಕ ಉತ್ತರ ಕೊಡ್ತೀನಿ: ಕಿಚ್ಚ ಸುದೀಪ್

ಬೆದರಿಕೆ ಪತ್ರ ಬರೆದವರಿಗೆ ತಕ್ಕ ಉತ್ತರ ಕೊಡ್ತೀನಿ: ಕಿಚ್ಚ ಸುದೀಪ್
ಬೆಂಗಳೂರು , ಬುಧವಾರ, 5 ಏಪ್ರಿಲ್ 2023 (16:42 IST)
ಬೆಂಗಳೂರು: ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಅವರಿಗೆ ಎರಡು ಬೆದರಿಕೆ ಪತ್ರಗಳು ಬಂದಿತ್ತು.

ಸುದೀಪ್ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿತ್ತು. ಈ ಹಿನ್ನಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸುದೀಪ್, ‘ಚಿತ್ರರಂಗದಲ್ಲೇ ನನ್ನನ್ನು ಕಂಡರಾಗದ ಕೆಲವರಿದ್ದಾರೆ. ಬೆದರಿಕೆ ಪತ್ರಗಳಿಗೆಲ್ಲಾ ಹೆದರುವುದಿಲ್ಲ. ಪತ್ರ ಬರೆದವರು ಯಾರು ಅಂತಾನೂ ನನಗೆ ಗೊತ್ತು. ಆದರೆ ಅವರ ಹೆಸರು ಇಲ್ಲಿ ಹೇಳಲ್ಲ. ಅವರಿಗೆ ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಬೊಮ್ಮಾಯಿಗೆ ಬೆಂಬಲ ವ್ಯಕ್ತಪಡಿಸಿದ ಕಿಚ್ಚ ಸುದೀಪ್: ಬಿಜೆಪಿಗೆ ಭಾರೀ ಬಲ