Publish Date: Tue, 12 Oct 2021 (11:02 IST)
Updated Date: Tue, 12 Oct 2021 (11:04 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಕೊನೆಯ ಪಂದ್ಯವಾಡಿದ ವಿರಾಟ್ ಕೊಹ್ಲಿ ಬಗ್ಗೆ ಕ್ರಿಕೆಟ್ ಪ್ರಿಯ, ನಟ ಕಿಚ್ಚ ಸುದೀಪ್ ಮಾತನಾಡಿದ್ದಾರೆ.
ಆರ್ ಸಿಬಿ ಪ್ಲೇ ಆಫ್ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸೋಲು ಅನುಭವಿಸಿದ ಬಳಿಕ ಸುದೀಪ್ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಿಮ್ಮ ನಾಯಕತ್ವವನ್ನು ನಾವು ಮಿಸ್ ಮಾಡಿಕೊಳ್ಳಲಿದ್ದೇವೆ ವಿರಾಟ್ ಕೊಹ್ಲಿ. ನೀವು ತೆಗೆದುಕೊಂಡಿದ್ದ ನಿರ್ಧಾರ ಸುಲಭವಾಗಿರಲಿಲ್ಲ. ನಿಮ್ಮನ್ನು ಫೈನಲ್ ನಲ್ಲಿ ಮಿಸ್ ಮಾಡಿಕೊಳ್ಳಲಿದ್ದೇವೆ ಎಂದು ಕಿಚ್ಚ ಬರೆದುಕೊಂಡಿದ್ದಾರೆ. ಐಪಿಎಲ್ 14 ರ ಪಂದ್ಯಗಳನ್ನು ನೋಡಲು ದುಬೈಗೆ ತೆರಳಿದ್ದ ಸುದೀಪ್ ಈಗ ತವರಿಗೆ ಮರಳಿದ್ದಾರೆ. ಹಾಗಿದ್ದರೂ ಐಪಿಎಲ್ ನಲ್ಲಿ ಆರ್ ಸಿಬಿಯನ್ನು ಸತತವಾಗಿ ಬೆಂಬಲಿಸುತ್ತಲೇ ಬಂದಿದ್ದಾರೆ.