Publish Date: Wed, 01 Apr 2020 (09:57 IST)
Updated Date: Wed, 01 Apr 2020 (09:58 IST)
ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಹಲವಾರು ಜನರ ಪರ ಊರುಗಳಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಅಂತಹವರಿಗೆ ಸಹಾಯ ಮಾಡುವಂತೆ ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ.
ಟ್ವಿಟರ್ ನಲ್ಲಿ ಲಾಕ್ ಡೌನ್ ನಿಂದಾಗಿ ಗುಜರಾತ್ ನಲ್ಲಿ ಬೇಕರಿ ಕೆಲಸ ಮಾಡಿಕೊಂಡಿದ್ದ ಹಾಸನ ಯುವಕರು ಊರಿಗೆ ಮರಳಲಾಗದೇ ಅತಂತ್ರ ಸ್ಥಿತಿಯಲ್ಲಿದ್ದಾರೆ. ಇವರಿಗೆ ಸಹಾಯ ಮಾಡುವಂತೆ ಕಿಚ್ಚ ಸುದೀಪ್ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.
ಈ ಯುವಕರು ಕೆಲಸ ಮಾಡುತ್ತಿದ್ದ ಬೇಕರಿಯನ್ನು ಮಾಲಿಕರು ಮುಚ್ಚಿದ್ದು, ಇದರಿಂದಾಗಿ ಹಲವು ಕನ್ನಡಿಗರು ಗುಜರಾತ್ ನಲ್ಲಿ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಇಂತಹ ಹಲವು ಜನ ಬೇರೆ ಬೇರೆ ಊರುಗಳಲ್ಲಿ ಸಿಲುಕಿಕೊಂಡಿದ್ದು ಅವರನ್ನು ಮರಳಿ ರಾಜ್ಯಕ್ಕೆ ಕರೆತರಲು ಸಹಾಯ ಮಾಡಿ ಎಂದು ಕಿಚ್ಚ ಮನವಿ ಮಾಡಿದ್ದಾರೆ.