Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಗೆ ಕಿಚ್ಚ ಸುದೀಪ್ ನಿರ್ದೇಶನ!

Webdunia
ಶನಿವಾರ, 17 ಮಾರ್ಚ್ 2018 (09:19 IST)
ಬೆಂಗಳೂರು: ಇದು ನಿಜವಾಗಲು ಸಾಧ್ಯವೇ? ಅಂತ ನೀವು ಕೇಳಬಹುದು. ಸಾಹಸಸಿಂಹ ವಿಷ್ಣುವರ್ಧನ್ ನಮ್ಮನ್ನೆಲ್ಲಾ ಅಗಲಿ ಎಷ್ಟೋ ದಿನಗಳಾಗಿವೆ. ಆದರೆ ಈಗ ಹೇಗೆ ಕಿಚ್ಚ ವಿಷ್ಣುದಾದಾಗೆ ನಿರ್ದೇಶನ ಮಾಡಲು ಸಾಧ್ಯ?

ನಿಜ ಜೀವನದಲ್ಲಿ ಇದು ಸಾಧ್ಯವಿಲ್ಲದೇ ಇರಬಹುದು. ಆದರೆ ಕನಸಿನಲ್ಲಿ ಸಾಧ್ಯ. ಅಂತಹದ್ದೊಂದು ಕನಸು ಬಿದ್ದಿರುವುದು ನಟಿ ಅನುಪ್ರಭಾಕರ್ ಗೆ. ಶಾಂತಿ ನಿವಾಸ ಸಿನಿಮಾದಲ್ಲಿ ಇವರು ಒಟ್ಟಿಗೇ ನಟಿಸಿದ್ದರು. ಕಿಚ್ಚ ಸುದೀಪ್ ಈ ಸಿನಿಮಾವನ್ನು ನಿರ್ದೇಶಿಸಿದ್ದರು.

ಇದೀಗ ಮತ್ತೆ ಅನುಪ್ರಭಾಕರ್ ಗೆ ಹಾಗೊಂದು ಕನಸು ಬಿದ್ದಿದೆಯಂತೆ. ಅದನ್ನು ಕಿಚ್ಚನಿಗೆ ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ. ಈವತ್ತು ಬೆಳ್ಳಂ ಬೆಳಿಗ್ಗೆ ಒಂದು ಅದ್ಭುತ ಕನಸು ಕಂಡೆ. ಆ ಕನಸಿನಲ್ಲಿ ನೀವು ವಿಷ್ಣು ಸರ್ ಮತ್ತು ನನ್ನ ದೃಶ್ಯಕ್ಕೆ ನಿರ್ದೇಶನ ಮಾಡುತ್ತಿದ್ದಿರಿ. ಇದೊಂದೇ ಕನಸಿನಿಂದಾಗಿ ನಗು ನಗುತ್ತಲೇ ದಿನ ಆರಂಭಿಸಿದೆ ಎಂದು ಅನುಪ್ರಭಾಕ್ ಟ್ವೀಟ್ ಮಾಡಿದ್ದರು.

ಇದಕ್ಕೆ ಉತ್ತರಿಸಿದ ಕಿಚ್ಚ ಸುದೀಪ್, ಶಾಂತಿ ನಿವಾಸ ಸಿನಿಮಾದಲ್ಲಿ ಆ ಕನಸು ನನಸಾಗಿತ್ತು. ನಿಮ್ಮನ್ನು ಡೈರೆಕ್ಟ್ ಮಾಡೋದು ನಿಜಕ್ಕೂ ಅದ್ಭುತ ಅನುಭವ ಎಂದಿದ್ದಾರೆ. ಬೆಳಗಿನ ಕನಸು ಈ ವಿಚಾರದಲ್ಲಿ ನನಸಾಗೋದು ಸಾಧ್ಯವಿಲ್ಲ ಬಿಡಿ!

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments