Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ-ಸುದೀಪ್ ಕಾಂಬಿನೇಷನ್ ಮುರಿದುಬಿತ್ತು!

Webdunia
ಭಾನುವಾರ, 3 ಸೆಪ್ಟಂಬರ್ 2017 (08:33 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಹೊಸದಾಗಿ ಕನ್ನಡ ಚಿತ್ರರಂಗಕ್ಕೆ ಬಂದ ಸೆನ್ಸೇಷನ್. ಕಿಚ್ಚ ಸುದೀಪ್ ಹಳೇ ಹುಲಿ. ಇವರಿಬ್ಬರೂ ಸೇರಿಕೊಂಡು ಅದ್ಭುತ ಸಿನಿಮಾ ಮಾಡುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಬಂದಿದೆ.

 
ರಕ್ಷಿತ್ ಶೆಟ್ಟಿ ನಿರ್ದೇಶನದಲ್ಲಿ ಸುದೀಪ್ ‘ಥಗ್ಸ್ ಆಫ್ ಮಾಲ್ಗುಡೀಸ್’ ಸಿನಿಮಾ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ಇವರಿಬ್ಬರೂ ಇದನ್ನು ಬಹಿರಂಗವಾಗಿ ಘೋಷಿಸಿಕೊಂಡಿದ್ದರು. ಎಲ್ಲಾ ಸರಿಯಾಗಿದ್ದರೆ ಕಿರಿಕ್ ಪಾರ್ಟಿ ಮುಗಿದ ಮೇಲೆ ರಕ್ಷಿತ್ ಈ ಸಿನಿಮಾ ಕೈಗೆತ್ತಿಕೊಳ್ಳಬೇಕಾಗಿತ್ತು.

ಆದರೆ ಎಲ್ಲವೂ ಮುರಿದು ಬಿದ್ದಿದೆ. ಇದಕ್ಕೆ ಕಾರಣ ರಕ್ಷಿತ್ ಈ ಸಿನಿಮಾ ಮಾಡಲು ನಿಧಾನ ಮಾಡಿದ್ದು. ಸುದೀಪ್ ಕೃಷ್ಣ ನಿರ್ದೇಶನದಲ್ಲಿ ಪೈಲ್ವಾನ್ ಚಿತ್ರ ಮಾಡುತ್ತಿರುವುದು. ಇವರಿಬ್ಬರ ಟ್ವಿಟರ್ ಸಂಭಾಷಣೆಯಿಂದ ಇದು ಪಕ್ಕಾ ಆಗಿದೆ.

ಜತೆಗೆ ಸ್ಕ್ರಿಪ್ಟ್ ಮಾಡಿಕೊಳ್ಳಲು ತಡ ಮಾಡಿದ ರಕ್ಷಿತ್ ಬಗ್ಗೆ ಸುದೀಪ್ ಗೆ ಕೊಂಚ ಬೇಸರವೂ ಆಗಿದೆ ಎಂಬ ಗಾಳಿ ಸುದ್ದಿ ಬಂದಿದೆ. ಇನ್ನು ಈ ವಿಷಯದ ಬಗ್ಗೆ ಮಾತನಾಡಲು ಏನೂ ಉಳಿದಿಲ್ಲ ಎಂದು ಸುದೀಪ್ ಖಡಕ್ ಆಗಿ ಟ್ವಿಟರ್ ನಲ್ಲಿ ರಕ್ಷಿತ್ ಗೆ ಹೇಳಿರುವುದು ಎಲ್ಲವೂ ಮುಗಿದಿದೆ ಎನ್ನುವುದನ್ನು ಕನ್ ಫರ್ಮ್ ಮಾಡಿದೆ.

ಇದನ್ನೂ ಓದಿ.. ಪ್ರಧಾನಿ ಮೋದಿ ಸರ್ವಾಧಿಕಾರಿ ಎಂದ ಬಿಜೆಪಿ ಸಂಸದ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments