Webdunia - Bharat's app for daily news and videos

Install App

ಖ್ಯಾತ ಗಾಯಕ ಯೇಸುದಾಸ್ ಗೆ ಕೊನೆಗೂ ಅನಂತ ಪದ್ಮನಾಭ ದೇವಾಲಯಕ್ಕೆ ಪ್ರವೇಶ ಸಿಕ್ಕಿತು!

Webdunia
ಮಂಗಳವಾರ, 19 ಸೆಪ್ಟಂಬರ್ 2017 (10:23 IST)
ತಿರುವನಂತಪುರಂ: ಬಹುಭಾಷಾ ಗಾಯಕ ಕೆಜೆ ಯೇಸುದಾಸ್ ಗೆ ಕೊನೆಗೂ ಪ್ರಸಿದ್ಧ ಹಿಂದೂ ದೇವಾಲಯವಾದ ಅನಂತಪದ್ಮನಾಭ ಕ್ಷೇತ್ರ ಪ್ರವೇಶಿಸಲು ಒಪ್ಪಿಗೆ ಸಿಕ್ಕಿದೆ. ದೇವಾಲಯ ಪ್ರವೇಶಕ್ಕೆ ಒಪ್ಪಿಗೆ ನೀಡುವಂತೆ ಯೇಸುದಾಸ್ ದೇವಾಲಯಗಳ ಟ್ರಸ್ಟ್ ಗೆ ಮನವಿ ಪತ್ರ ಬರೆದಿದ್ದರು.


ಅದಕ್ಕೀಗ ಟ್ರಸ್ಟ್ ಸ್ಪಂದಿಸಿದ್ದು, ದೇವಾಲಯ ಪ್ರವೇಶಿಸಲು ಅನುಮತಿ ನೀಡಿದೆ. ಈ ದೇವಾಲಯದಲ್ಲಿ ಹಿಂದೂಗಳಿಗೆ ಮತ್ತು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡವರಿಗೆ ಮಾತ್ರ ಪ್ರವೇಶ ಎಂಬ ನಿಯಮವಿದೆ. ಆದರೆ ಯೇಸುದಾಸ್ ಮೂಲತಃ ಕ್ರಿಶ್ಚಿಯನ್ ಆಗಿದ್ದರಿಂದ ಪ್ರವೇಶ ಸಾಧ್ಯವಾಗುತ್ತಿರಲಿಲ್ಲ.

ಆದರೆ ಹಲವು ಹಿಂದೂ ಭಕ್ತಿಗೀತೆಗಳಿಗೆ, ಭಜನೆಗಳಿಗೆ ಧ್ವನಿ ನೀಡಿರುವ ಯೇಸುದಾಸ್ ಹಿಂದೂಗಳಂತೆಯೇ ಹಿಂದೂ ಧರ್ಮದ ಆಚರಣೆ ಪಾಲಿಸುತ್ತಾರೆ. ಹೀಗಾಗಿ ತಮಗೆ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಇದೀಗ ಖ್ಯಾತ ಗಾಯಕನ ಮನವಿಗೆ ಮನ್ನಣೆ ಸಿಕ್ಕಿದೆ.

ಇದನ್ನೂ ಓದಿ…  ಅಮೆರಿಕಾದಲ್ಲಿ ನಾಳೆ ರಾಹುಲ್ ಗಾಂಧಿ ಭಾಷಣ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments