Select Your Language

Notifications

webdunia
webdunia
webdunia
webdunia

ದರುಶನ ಕೊಡು ಅನಂತಪದ್ಮನಾಭ…! ಖ್ಯಾತ ಗಾಯಕ ಯೇಸುದಾಸ್ ಮನವಿ

ದರುಶನ ಕೊಡು ಅನಂತಪದ್ಮನಾಭ…! ಖ್ಯಾತ ಗಾಯಕ ಯೇಸುದಾಸ್ ಮನವಿ
ತಿರುವನಂತಪುರಂ , ಸೋಮವಾರ, 18 ಸೆಪ್ಟಂಬರ್ 2017 (09:58 IST)
ತಿರುವನಂತಪುರಂ: ಕೇರಳ ರಾಜಧಾನಿಯಲ್ಲಿರುವ ಪ್ರಸಿದ್ಧ ಶ್ರೀ ಅನಂತಪದ್ಮನಾಭ ಸ್ವಾಮಿಯ ದರ್ಶನಕ್ಕೆ ಅನುವು ಮಾಡಿಕೊಡುವಂತೆ ಖ್ಯಾತ ಗಾಯಕ ಯೇಸುದಾಸ್ ದೇವಾಲಯದ ಟ್ರಸ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ಅನಂತ ಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಹಿಂದೂಗಳು ಮತ್ತು ಹಿಂದುತ್ವದಲ್ಲಿ ನಂಬಿಕೆ ಇಟ್ಟವರಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂಬ ಕಟ್ಟಪಾಡು ಇದೆ. ಹಾಗಾಗಿ ಮೂಲತಃ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಯೇಸುದಾಸ್ ಅವರಿಗೆ ಪ್ರವೇಶ ನೀಡಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಅವರು ಟ್ರಸ್ಟ್ ಗೆ ಮನವಿ ಪತ್ರವೊಂದನ್ನು ಬರೆದಿದ್ದಾರೆ.

ನಾನು ಕ್ರಿಶ್ಚಿಯನ್ ಧರ್ಮದಲ್ಲಿ ಹುಟ್ಟಿದ್ದರೂ ಹಿಂದೂ ಆಚರಣೆಗಳಲ್ಲಿ ನಂಬಿಕೆಯಿಟ್ಟವನು. ಹಾಗಾಗಿ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿ ಎಂದು ಪತ್ರದಲ್ಲಿ ಹಿರಿಯ ಗಾಯಕ ಮನವಿ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ದೇವಾಲಯದ ಅಧಿಕಾರಿ ವಿ ರತೀಶನ್, ಹಿಂದೂ ಧರ್ಮದಲ್ಲಿ ನಂಬಿಕೆಯಿಟ್ಟವರು ದೇವಾಲಯ ಪ್ರವೇಶಿಸುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದಿದ್ದಾರೆ. ಯೇಸುದಾಸ್ ತಾವು ಯಾವಾಗ ದೇವಾಲಯಕ್ಕೆ ಭೇಟಿ ನೀಡುವುದಾಗಿ ಪತ್ರದಲ್ಲಿ ತಿಳಿಸಿಲ್ಲ. ಆದರೆ ವಿಜಯದಶಮಿಯಂದು ಅವರು ದೇವಾಲಯಕ್ಕೆ ಆಗಮಿಸಬಹುದೆಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಗಳಿಗಾಗಿ ಅಪ್ಪಂದಿರು ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದ ಅಭಿಷೇಕ್ ಬಚ್ಚನ್!