Webdunia - Bharat's app for daily news and videos

Install App

ದರುಶನ ಕೊಡು ಅನಂತಪದ್ಮನಾಭ…! ಖ್ಯಾತ ಗಾಯಕ ಯೇಸುದಾಸ್ ಮನವಿ

Webdunia
ಸೋಮವಾರ, 18 ಸೆಪ್ಟಂಬರ್ 2017 (09:58 IST)
ತಿರುವನಂತಪುರಂ: ಕೇರಳ ರಾಜಧಾನಿಯಲ್ಲಿರುವ ಪ್ರಸಿದ್ಧ ಶ್ರೀ ಅನಂತಪದ್ಮನಾಭ ಸ್ವಾಮಿಯ ದರ್ಶನಕ್ಕೆ ಅನುವು ಮಾಡಿಕೊಡುವಂತೆ ಖ್ಯಾತ ಗಾಯಕ ಯೇಸುದಾಸ್ ದೇವಾಲಯದ ಟ್ರಸ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ಅನಂತ ಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಹಿಂದೂಗಳು ಮತ್ತು ಹಿಂದುತ್ವದಲ್ಲಿ ನಂಬಿಕೆ ಇಟ್ಟವರಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂಬ ಕಟ್ಟಪಾಡು ಇದೆ. ಹಾಗಾಗಿ ಮೂಲತಃ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಯೇಸುದಾಸ್ ಅವರಿಗೆ ಪ್ರವೇಶ ನೀಡಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಅವರು ಟ್ರಸ್ಟ್ ಗೆ ಮನವಿ ಪತ್ರವೊಂದನ್ನು ಬರೆದಿದ್ದಾರೆ.

ನಾನು ಕ್ರಿಶ್ಚಿಯನ್ ಧರ್ಮದಲ್ಲಿ ಹುಟ್ಟಿದ್ದರೂ ಹಿಂದೂ ಆಚರಣೆಗಳಲ್ಲಿ ನಂಬಿಕೆಯಿಟ್ಟವನು. ಹಾಗಾಗಿ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿ ಎಂದು ಪತ್ರದಲ್ಲಿ ಹಿರಿಯ ಗಾಯಕ ಮನವಿ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ದೇವಾಲಯದ ಅಧಿಕಾರಿ ವಿ ರತೀಶನ್, ಹಿಂದೂ ಧರ್ಮದಲ್ಲಿ ನಂಬಿಕೆಯಿಟ್ಟವರು ದೇವಾಲಯ ಪ್ರವೇಶಿಸುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದಿದ್ದಾರೆ. ಯೇಸುದಾಸ್ ತಾವು ಯಾವಾಗ ದೇವಾಲಯಕ್ಕೆ ಭೇಟಿ ನೀಡುವುದಾಗಿ ಪತ್ರದಲ್ಲಿ ತಿಳಿಸಿಲ್ಲ. ಆದರೆ ವಿಜಯದಶಮಿಯಂದು ಅವರು ದೇವಾಲಯಕ್ಕೆ ಆಗಮಿಸಬಹುದೆಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ… ದಕ್ಷಿಣ ಭಾರತದಲ್ಲೀಗ ಹುಯ್ಯೋ ಹುಯ್ಯೋ ಮಳೆರಾಯ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments