Webdunia - Bharat's app for daily news and videos

Install App

ದರ್ಶನ್ ತೂಗುದೀಪ ಮನೆಗೆ ಎದುರಾಗುತ್ತಾ ಅಪಾಯ?

Webdunia
ಶುಕ್ರವಾರ, 19 ಆಗಸ್ಟ್ 2016 (12:43 IST)
ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ಭರದಿಂದ ಸಾಗುತ್ತಿದೆ. ರಾಜಾ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಅದರಲ್ಲಿ ಹತ್ತಾರು ಅಂತಸ್ತಿನ ಮನೆ ಕಟ್ಟಿಕೊಂಡ ಅನೇಕರು ಇದೀಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ನಿರಂತರವಾಗಿ ಸಾಗುತ್ತಿರುವ ಒತ್ತೆವಪಿ ತೆರವು ಕಾರ್ಯಾಚರಣೆಯಿಂದಾಗಿ ಒತ್ತುವರಿದಾರರ ಎದೆಯಲ್ಲಿ ನಡುಕ ಶುರುವಾಗಿದೆ.
 
ಇನ್ನು ಈ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಿಸಿ ನಟ ದರ್ಶನ್ ಅವರ ನಿವಾಸಕ್ಕೂ ತಟ್ಟಲಿದೆಯಂತೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ತೂಗುದೀಪ ನಿಲಯವನ್ನು ರಾಜಾ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದೆಯಂತೆ. ಇನ್ನು ರಾಜರಾಜೇಶ್ವರಿ ನಗರದಲ್ಲಿ ಐಡಿಯಲ್ ಹೋಂ ಟೌನ್ ಶಿಪ್ ನಿಂದ ನಿರ್ಮಾಣವಾಗಿರುವ ಲೇ ಔಟ್ ನಲ್ಲಿ ನಟ ದರ್ಶನ್ ಅವರು, ಎಫ್ ರೋಡ್ ನಲ್ಲಿ ನಿವೇಶನ ಖರೀದಿಸಿ ಮನೆ ನಿರ್ಮಿಸಿದ್ದಾರೆ. ಕಂದಾಯ ಇಲಾಖೆಯ ಸೂಪರ್ ಇಂಪೋಸ್ ಮ್ಯಾಪ್‌ನಲ್ಲಿ ಈ ನಿವೇಶನ, ರಂಗೋಲಿ ಹಳ್ಳದ ವ್ಯಾಪ್ತಿಯಲ್ಲಿ ಬರುತ್ತದೆ ಎನ್ನಲಾಗಿದೆ. ಹೀಗಾಗಿ ದರ್ಶನ್ ಅವರ ಮನೆಗೂ ಒತ್ತುವರಿ ತೆರವು ಬಿಸಿ ತಟ್ಟಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.
 
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜರಾಜೇಶ್ವರಿ ನಗರದ ಜಂಟಿ ಆಯುಕ್ತರಾದ ವೀರಭದ್ರಪ್ಪ ರಾಜಕಾಲುವೆ ಒತ್ತುವರಿ ಸರ್ವೆಯಲ್ಲಿ ನಟ ದರ್ಶನ್ ಅವರ ಮನೆ ರಾಜಕಾಲುವೆ ಜಾಗದಲ್ಲಿ ನಿರ್ಮಾಣವಾಗಿದೆ ಅನ್ನೋದು ಗೊತ್ತಾದರೆ ಅವರ ಮನೆಯನ್ನು ಒಡೆಯೋದಕ್ಕೂ ಹಿಂಜರಿಯೋದಿಲ್ಲ. ಈಗಾಗಲೇ ಭೂ ಮಾಪಕರಿಗೆ ಈ ಬಗ್ಗೆ ಪರಿಶೀಲನೆ ನಡೆಸೋದಕ್ಕೆ ಸೂಚಿಸಿದ್ದೇನೆ ಅಂತಾ ಹೇಳಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments