Webdunia - Bharat's app for daily news and videos

Install App

ಬಿಗ್‌ಬಾಸ್‌ಗೆ ಧಮ್ಕಿ ಹಾಕಿದ ಲಾಯರ್ ಜಗದೀಶ್ ಒಂದು ವಾರದಲ್ಲೇ ಹೊರ ನಡೆಯುತ್ತಾರಾ

Sampriya
ಗುರುವಾರ, 3 ಅಕ್ಟೋಬರ್ 2024 (16:05 IST)
Photo Courtesy X
ಬೆಂಗಳೂರು: ಟಾಸ್ಕ್ ವಿಚಾರವಾಗಿ ಧನರಾಜ್ ಆಚಾರ್ ಜತೆ ಕಿತ್ತಾಡಿಕೊಂಡ ದಿನವೇ ಲಾಯರ್ ಜಗದೀಶ್ ಅವರು ಬಿಗ್‌ಬಾಸ್ ಮನೆಯಿಂದ ಹೊರ ನಡೆಯುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.  ಬಿಗ್‌ಬಾಸ್‌ ರಿಯಾಲಿಟಿ ಶೋ ಆರಂಭವಾಗಿ ಕೇವಲ ಮೂರನೇ ದಿನಕ್ಕೆ ಲಾಯರ್ ಜಗದೀಶ್ ನಡೆ ಕುತೂಹಲ ಮೂಡಿಸುತ್ತಿದೆ.

ಸ್ವರ್ಗ ಹಾಗೂ ನರಕ ನಿವಾಸಿಗಳು ನಡುವೆ ಈಗಾಗಲೇ ಭಿನ್ನಾಭಿಪ್ರಾಯ ಶುರುವಾಗಿದೆ. ಇನ್ನೂ ಸ್ವರ್ಗ ನಿವಾಸಿಯಾಗಿರುವ ಜಗದೀಶ್ ಅವರಿಗೆ ನರಕ ನಿವಾಸಿಗಳನ್ನು ಮಾನವೀಯತೆ ಇಲ್ಲದ ಹಾಗೇ ನೋಡಿಕೊಳ್ಳಲಾಗುತ್ತಿದೆ. ಇದರಿಂದ ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಅದಲ್ಲದೆ ಬಿಗ್‌ಬಾಸ್‌ಗೆ ಅವಾಜ್ ಹಾಕಿ, ನಮ್ಮನ್ನು ಎದುರು ಹಾಕಿಕೊಂಡು ಬಿಗ್‌ಬಾಸ್ ಹೇಗೆ ಓಡಿಸ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.  ಅದಲ್ಲದೆ ಬಿಗ್‌ಬಾಸ್ ಕಾರ್ಯಕ್ರಮದ ಹೆಸರು ಹಾಳು ಮಾಡುವುದಾಗಿಯೂ, ಅಲ್ಲಿಗೆ ಯಾರು ಕಾಲಿಡದಂತೆ ಮಾಡುವುದಾಗಿಯೂ ಹೇಳಿದ್ದಾರೆ.

ಜಗದೀಶ್ ಅವರು ಈಗಾಗಲೇ ಬಿಗ್‌ಬಾಸ್ ರೂಲ್ಸ್‌ ಬ್ರೇಕ್ ಮಾಡಿ ನರಕ ನಿವಾಸಿಗಳಿಗೆ ಸ್ವರ್ಗ ನಿವಾಸಿಗಳ ಆಹಾರ ಕೊಡುವುದು, ಬಿಸಿ ನೀರು ಕಾಯಿಸಿಕೊಡುವುದು, ನರಕ ನಿವಾಸಿಗಳು ಮಾಡಬೇಕಾದ ಕೆಲಸಗಳನ್ನು ತಾವೇ ಮಾಡಿ ಮನೆಯವರ ಕೋಪಕ್ಕೆ ಕಾರಣರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments