Webdunia - Bharat's app for daily news and videos

Install App

ಯುವ ನಟರ ಭವಿಷ್ಯಕ್ಕೆ ಕುತ್ತಾಯಿತು ಲಾಕ್ ಡೌನ್, ಡಬ್ಬಿಂಗ್

Webdunia
ಶುಕ್ರವಾರ, 10 ಜುಲೈ 2020 (08:56 IST)
ಬೆಂಗಳೂರು: ಈಗಷ್ಟೇ ಪ್ರವರ್ಧಮಾನಕ್ಕೆ ಬರುತ್ತಿರುವ ಕಿರುತೆರೆ, ಹಿರಿತೆರೆ ಕಲಾವಿದರಿಗೆ ಲಾಕ್ ಡೌನ್, ಅದಾದ ಬಳಿಕ ಡಬ್ಬಿಂಗ್ ಎನ್ನುವುದು ಭವಿಷ್ಯವನ್ನೇ ಕಸಿದುಕೊಂಡಿದೆ.


ಇದೇ ಕಾರಣಕ್ಕೇ ಸುಶೀಲ್ ಗೌಡ ಆತ್ಮಹತ್ಯೆ ಪ್ರಕರಣದಂತಹ ಘಟನೆಗಳು ನಡೆಯುತ್ತಿದೆ ಎಂದರೂ ತಪ್ಪಾಗಲಾರದು. ಮನೋಬಲ ಗಟ್ಟಿಯಾಗಿದ್ದರೆ, ಅಂತಹ ಸಮಯದಲ್ಲಿ ಆಪ್ತರ ಬೆಂಬಲ ಸಿಕ್ಕರೆ ಜೀವನದಲ್ಲಿ ಹೊಸ ಭರವಸೆ ಸಿಗುತ್ತದೆ. ಇಲ್ಲದೇ ಹೋದರೆ ಮನುಷ್ಯ ಆತ್ಮಹತ್ಯೆಯಂತಹ ಕೆಟ್ಟ ದಾರಿ ನೋಡಿಕೊಳ್ಳುತ್ತಾನೆ.

ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಕಿರುತೆರೆ ಚಟುವಟಿಕೆಗಳು ಪುನರಾರಂಭಗೊಂಡರೂ ಡಬ್ಬಿಂಗ್ ಹೊಡೆತದಿಂದ ಅನೇಕ ಕನ್ನಡ ಕಲಾವಿದರು ಕೆಲಸ ಕಳೆದುಕೊಂಡಿದ್ದಾರೆ. ಇದು ಹಲವು ಯುವ ಕಲಾವಿದರನ್ನು, ಕಲೆಯನ್ನೇ ನಂಬಿಕೊಂಡವರ ಬದುಕು ದುಸ್ತರವಾಗಿಸಲಿದೆ.

ಇನ್ನು ಹಿರಿತೆರೆಯಲ್ಲೂ ಇದೇ ಕತೆ. ಶೂಟಿಂಗ್ ಮತ್ತಿತರ ಚಟುವಟಿಕೆಗಳಿಗೆ ಅನುಮತಿ ಕೊಟ್ಟರೂ ಚಿತ್ರಗಳೇ ಬಿಡುಗಡೆಯಾಗುತ್ತಿಲ್ಲ ಎಂದಾದರೆ ಶೂಟಿಂಗ್ ಮಾಡಿಯೂ ಏನು ಪ್ರಯೋಜನ? ಇನ್ನು ಕೆಲವರು ಲಾಕ್ ಡೌನ್ ಗೆ ಮೊದಲು ಹೊಸ ಸಿನಿಮಾ ಮಾಡಲು ಹೊರಟಿದ್ದರೂ ಲಾಕ್ ಡೌನ್ ಬಳಿಕ ಆರ್ಥಿಕ ಸಂಕಷ್ಟದಿಂದಾಗಿ ಸಿನಿಮಾ ಅರ್ಧಕ್ಕೇ ಕೈ ಬಿಟ್ಟಿದ್ದಾರೆ. ಮತ್ತೆ ಕೆಲವು ಸೆಟ್ಟೇರಿದ ಸಿನಿಮಾಗಳೂ ಮುಂದೆ ಪೂರ್ತಿಯಾಗುತ್ತಾ, ಹೇಳ ಹೆಸರಿಲ್ಲದೇ ತೆರೆಮರೆಗೆ ಸಾಗುತ್ತಾ ಅನ್ನುವ ಗೊಂದಲದಲ್ಲೇ ಇವೆ.

ಇದರಿಂದಾಗಿ ಯವ ಕಲಾವಿದರು, ಆಗಷ್ಟೇ ಪ್ರವರ್ಧಮಾನಕ್ಕೆ ಬರುತ್ತಿರುವವರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಇದನ್ನು ಯಾರಲ್ಲೂ ಹೇಳಿಕೊಳ್ಳಲಾಗದೇ ಹಲವರು ಒಳಗೊಳಗೇ ಕೊರಗುತ್ತಿದ್ದಾರೆ. ಹೀಗಾಗಿ ಕಿರುತೆರೆ ವಾಹಿನಿಗಳು ಡಬ್ಬಿಂಗ್ ಬಿಟ್ಟು ನಮ್ಮ ಕಲಾವಿದರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments