Webdunia - Bharat's app for daily news and videos

Install App

Madenur Manu: ಸಿನಿಮಾ, ಕಿರುತೆರೆ ಎರಡರಿಂದ ಮಡೆನೂರು ಮನುಗೆ ನಿಷೇಧ

Krishnaveni K
ಮಂಗಳವಾರ, 27 ಮೇ 2025 (14:25 IST)
ಬೆಂಗಳೂರು: ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಅಡಿಯೋ ವೈರಲ್ ಆದ ಬೆನ್ನಲ್ಲೇ ರೇಪ್ ಆರೋಪಕ್ಕೊಳಗಾಗಿ ಬಂಧನದಲ್ಲಿರುವ ನಟ ಮಡೆನೂರು ಮನುವನ್ನು ಸಿನಿಮಾ ಮತ್ತು ಕಿರುತೆರೆಯಿಂದ ಬ್ಯಾನ್ ಮಾಡಲಾಗಿದೆ.

ಸಹನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಡೆನೂರು ಮನು ಈಗ ಬಂಧನದಲ್ಲಿದ್ದಾರೆ. ಮೊನ್ನೆಯಷ್ಟೇ ಅವರ ಮೊದಲ ಸಿನಿಮಾ ಕುಲದಲ್ಲಿ ಕೀಳ್ಯಾವುದೋ ಬಿಡುಗಡೆಯಾಗಿತ್ತು. ಇದರ ಬೆನ್ನಲ್ಲೇ ಅವರಿಗೆ ನಿಷೇಧದ ಶಿಕ್ಷೆ ಸಿಕ್ಕಿದೆ.

ರೇಪ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೇ ಮಡೆನೂರು ಮನು ಅಡಿಯೋ ಒಂದು ವೈರಲ್ ಆಗಿತ್ತು. ಇದರಲ್ಲಿ ಮನು ದರ್ಶನ್ ಸತ್ತೋದ, ಶಿವಣ್ಣ ಇನ್ನೊಂದು ಆರು ವರ್ಷ ಆದ ಮೇಲೆ ಸಾಯ್ತಾರೆ ಎಂದೆಲ್ಲಾ ಮನಬಂದಂತೆ ಮಾತನಾಡಿದ್ದರು.

ಇದರ ಬೆನ್ನಲ್ಲೇ ಇಂದು ಮಾಧ್ಯಮಗೋಷ್ಠಿ ನಡೆಸಿದ ಫಿಲಂ ಚೇಂಬರ್ ಮಡೆನೂರು ಮನುವನ್ನು ಸಿನಿಮಾದಿಂದ ಬ್ಯಾನ್ ಮಾಡಿರುವುದಾಗಿ ಘೋಷಣೆ ಮಾಡಿದೆ. ಅಲ್ಲದೆ, ಶಿವಣ್ಣ ವಿರುದ್ಧ ಅವಹೇಳನಕಾರೀ ಹೇಳಿಕೆ ನೀಡಿರುವುದರ ವಿರುದ್ಧ ಪೊಲೀಸರಿಗೆ ದೂರು ನೀಡುತ್ತಿರುವುದಾಗಿ ಫಿಲಂ ಚೇಂಬರ್ ಮುಖ್ಯಸ್ಥರು ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಯುವ ನಟನ ನಟನೆಯ ಕನಸು ಭಗ್ನಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ