Webdunia - Bharat's app for daily news and videos

Install App

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Krishnaveni K
ಶನಿವಾರ, 14 ಜೂನ್ 2025 (13:44 IST)
ಬೆಂಗಳೂರು: ಕನ್ನಡ ಚಿತ್ರರಂಗದಿಂದ ಬ್ಯಾನ್ ಆಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಈಗ ಅವಕಾಶಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ಈ ಸ್ಟಾರ್ ನಟನ ಮೊರೆ ಹೋಗಿದ್ದಾರೆ.

ಮಡೆನೂರು ಮನು ಸಹ ನಟಿ ಮೇಲೆ ಅತ್ಯಾಚಾರ, ಬಲವಂತದಿಂದ ತಾಳಿ ಕಟ್ಟಿದ ಆರೋಪದಲ್ಲಿ ಬಂಧಿತರಾಗಿದ್ದರು. ಇದೀಗ ಅವರು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಆದರೆ ಜೈಲಿನಲ್ಲಿದ್ದಾಗ ದರ್ಶನ್, ಶಿವಣ್ಣ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ ಅಡಿಯೋವೊಂದು ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ.

ಇದೀಗ ಮನುಗೆ ಕಿರುತೆರೆಯಲ್ಲೂ ಅವಕಾಶವಿಲ್ಲ, ಚಿತ್ರರಂಗದಲ್ಲೂ ಇಲ್ಲ ಎಂಬಂತಾಗಿದೆ. ಹೀಗಾಗಿ ಮಡೆನೂರು ಮನು ಸೊರಗಿ ಹೋಗಿದ್ದು, ಒಂದು ಅವಕಾಶಕ್ಕಾಗಿ ನಟ ಧ್ರುವ ಸರ್ಜಾ ಮೊರೆ ಹೋಗಿದ್ದಾರೆ. ನಾನು ಜೈಲಿನಿಂದ ಬಂದ ಮೇಲೆ ಖಿನ್ನತೆಗೊಳಗಾಗಿದ್ದಾನೆ. ಒಂದು ಅವಕಾಶ ಕೊಡಿಸಿ ಸಾರ್ ಎಂದು ಬೇಡಿಕೊಳ್ಳುತ್ತಿದ್ದಾರಂತೆ.

ಇದಕ್ಕೆ ಧ್ರುವ ಸರ್ಜಾ ಕೂಡಾ ದರ್ಶನ್ ಸರ್, ಶಿವಣ್ಣ ನಮ್ಮ ಹಿರಿಯ ನಟರು. ಅವರ ಕ್ಷಮೆ ಕೇಳು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಇದೀಗ ಮಡೆನೂರು ಮನು ಈ ರೀತಿ ಮಾಡಿ ಮತ್ತೆ ಚಿತ್ರರಂಗದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಾರಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments