Webdunia - Bharat's app for daily news and videos

Install App

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

Krishnaveni K
ಬುಧವಾರ, 9 ಜುಲೈ 2025 (15:18 IST)
ಬೆಂಗಳೂರು: ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ನಟ ಮಡೆನೂರು ಮನು ತಮ್ಮ ಮೇಲಿನ ಪ್ರಕರಣ ರದ್ದುಗೊಳಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಎಲ್ಲವೂ ಒಪ್ಪಿಗೆಯ ಮೇರೆಯೇ ನಡೆದಿದ್ದು ಎಂದಿದ್ದಾರೆ.

ಸಂತ್ರಸ್ತೆ ಜೊತೆಗೆ ಮನು ರಿಯಾಲಿಟಿ ಶೋ ಒಂದರಲ್ಲಿ ಕೆಲಸ ಮಾಡಿದ್ದರು. ಇಬ್ಬರೂ ಒಂದೇ ಬಾಡಿಗೆ ಮನೆಯಲ್ಲಿ ಕೆಲ ವರ್ಷ ಜೊತೆಗಿದ್ದರು. ಇಬ್ಬರ ನಡುವೆ ನಡೆದಿದ್ದು ಸಮ್ಮತಿಯ ಲೈಂಗಿಕ ಸಂಪರ್ಕ. ಹೀಗಿರುವಾಗ ಮನು ವಿರುದ್ಧ ಧ್ವೇಷ ಸಾಧಿಸುವ ಉದ್ದೇಶದಿಂದಲೇ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಕೋರ್ಟ್ ನಲ್ಲಿ ಮನು ಪರ ವಕೀಲರು ಮನವಿ ಮಾಡಿದ್ದಾರೆ.

ಇದೀಗ ಮನು ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿದೆ. ಮಡೆನೂರು ಮನು ಅಭಿನಯದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಬಿಡುಗಡೆಗೆ ಎರಡು ದಿನ ಇರುವಾಗ ರೇಪ್ ಕೇಸ್ ದಾಖಲಾಗಿತ್ತು. ಇದು ದುರುದ್ದೇಶಪೂರ್ವಕವಾಗಿ ದಾಖಲಿಸಿದ ಪ್ರಕರಣ ಎಂದು ವಕೀಲರು ವಾದಿಸಿದ್ದಾರೆ.

ಪ್ರಕರಣ ಸಂಬಂಧ ಮಡೆನೂರು ಮನು ಬಂಧಿತರಾಗಿ ಕೆಲವು ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ನಡುವೆ ಅವರು ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂಬ ಅಡಿಯೋ ವೈರಲ್ ಆಗಿತ್ತು. ಈ ಸಂಬಂಧ ಅವರು ಎಲ್ಲಾ ನಟರ ಕ್ಷಮೆಯನ್ನೂ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

ಮುಂದಿನ ಸುದ್ದಿ